ಡಿವಿಜಿಸುದ್ದಿ.ಕಾಂ, ದಾವಣಗೆರೆ: ರಾಜ್ಯದ ಮ್ಯಾಂಚೆಸ್ಟರ್ ಸಿಟಿಯಾಗಿದ್ದ ದಾವಣಗೆರೆಯಲ್ಲಿ ಇದೀಗ ಕಾರ್ಖಾನೆಗಳಿಲ್ಲದೆ ನಿರುದ್ಯೋಗ ತಾಂಡವಾಡುತ್ತಿದೆ. ಬಿಜೆಪಿ ಸರ್ಕಾರ ಗುಡಿ ಕೈಗಾರಿಕೆ ಸ್ಥಾಪನೆಗೆ ಹೆಚ್ಚಿನ ಒತ್ತು ನೀಡಬೇಕೇಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ಅವರಿಗೆ ಶೋಷಿತ ವರ್ಗಗಳ ಒಕ್ಕೂಟದ ಅಧ್ಯಕ್ಷ ಬಾಡದ ಆನಂದರಾಜ್ ಒತ್ತಾಯಿಸಿದರು.
ರೇಣುಕಾಚಾರ್ಯ ಅವರಿಗೆ ಸನ್ಮಾನಸಿ ಮನವಿ ಮಾಡಿಕೊಂಡರು. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ರಾಜಕೀಯ ಕಾರ್ಯದರ್ಶಿ ಆಗಿರುವುದರಿಂದ ದಾವಣಗೆರೆ ಜಿಲ್ಲೆಗೆ ವಿಶೇಷ ಅನುದಾನ ತರುಬೇಕು. ಅದರಲ್ಲೂ ವಿಶೇಷವಾಗಿ ದಾವಣಗೆರೆಯಲ್ಲಿ ಕಾರ್ಖಾನೆ ತೆರೆದು ನಿರುದ್ಯೋಗ ಸಮಸ್ಯೆ ನಿವಾರಿಸಬೇಕೆಂದು ಮನವಿ ಮಾಡಿಕೊಂಡರು.
ಈ ಸಂದರ್ಭದಲ್ಲಿ ಬಿಜೆಪಿಯ ಯುವನಾಯಕ ಲೋಕಿಕೆರೆ ನಾಗರಾಜ್, ದಿಳ್ಳೆಪ್ಪ, ಎಸ್.ಮುರುಳಿಯಾದವ್, ರೈತ ಮುಖಂಡ ಕೆಪಿ.ಕಲ್ಲಿಂಗಪ್ಪ, ಬಸವರಾಜ್, ಸೇರಿದಂತೆ ಮತ್ತಿತರರು ಇದ್ದರು



