ಫುಟ್ ಪಾತ್ ಮೇಲೆ ನಿಂತಿದ್ದವರ ಮೇಲೆ ಲಾರಿ ಡಿಕ್ಕಿ; ಸ್ಥಳದಲ್ಲಿಯೇ ಮೂವರ ಸಾವು, ಇಬ್ಬರ ಸ್ಥಿತಿ ಚಿಂತಾಜನಕ:  ಪಾನ್ ಶಾಪ್ ನಜ್ಜುಗುಜ್ಜು

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಡಿವಿಜಿ ಸುದ್ದಿ, ಬಾಗಲಕೋಟೆ: ಚಾಲಕನ ನಿಯಂತ್ರಣ ತಪ್ಪಿದ ಲಾರಿ ಫುಟ್ ಪಾತ್ ಮೇಲೆ ನಿಂತಿದ್ದವರ ಮೇಲೆ ಹರಿದ ಪರಿಣಾಮ ಮೂವರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಬಾದಾಮಿ ತಾಲೂಕಿನ ಕೆರೂರು ಪಟ್ಟಣದಲ್ಲಿ ನಡೆದಿದೆ.

ಕೆರೂರು ಪಟ್ಟಣದ ಲಕ್ಷ್ಮಣ ಹಾದಿಮನಿ (32), ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಮಾನಂದಪ್ಪ ಕರಿ (17) ಹಾಗೂ ಹುಬ್ಬಳ್ಳಿಯ ಪೂಜಾ ಹಳಪೇಟೆ (22) ಮೃತ ದುರ್ದೈಗಳಾಗಿದ್ದಾರೆ.

bagalkote accident

ಗದಗ ಜಿಲ್ಲೆ ನರಗುಂದದ ನಿವಾಸಿ ಮಂಜುಳಾ ಜವಳಿ (16) ಹಾಗೂ ಪ್ರಜ್ವಲ್ ಕೋಟಿ (16) ಗಂಭೀರವಾಗಿ ಗಾಯಗೊಂಡಿದ್ದಾರೆ.  ಅವರನ್ನು ಬಾಗಲಕೋಟೆ ಜಿಲ್ಲಾಸ್ಪತ್ರೆಗೆ ಸಾಗಿಸಲಾಗಿದೆ. ಮತ್ತೊಬ್ಬರನ್ನು  ಕೆರೂರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಹುಬ್ಬಳ್ಳಿಯಿಂದ ಬಾಗಲಕೋಟೆಗೆ ವೇಗವಾಗಿ ಹೊರಟಿದ್ದ ಲಾರಿ, ಕೆರೂರು ಪಟ್ಟಣದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಫುಟ್ ಪಾತ್‍ಗೆ ನುಗ್ಗಿದೆ. ಲಾರಿಯ  ರಭಸಕ್ಕೆ ಕೆಪಿಟಿಸಿಎಲ್ ವಿದ್ಯುತ್ ಪ್ರಸರಣ ಕೇಂದ್ರದ ಕಂಪೌಂಡ್ ಒಡೆದು ಹೋಗಿದ್ದು, ರಸ್ತೆ ಬದಿಯಲ್ಲಿದ್ದ  ಪಾನ್‍ಶಾಪ್ ಸಂಪೂರ್ಣವಾಗಿ ಹಾನಿಯಾಗಿದೆ.

ಪಾನ್‍ಶಾಪ್ ಮುಂದೆ ನಿಂತಿದ್ದವರ ಮೇಲೆ ಲಾರಿ ಹರಿದು ಮೂರು ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡು ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದಾರೆ.  ಈ ಸಂಬಂಧ ಕೆರೂರು ಪೊಲೀಸರು ಪರಿಶೀಲನೆ ನಡೆಸಿದರು. ಅಪಘಾತದ ಬಳಿಕ ಲಾರಿ ಚಾಲಕ ಪರಾರಿಯಾಗಿದ್ದು, ಆತನಿಗೆ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *