Connect with us

Dvgsuddi Kannada | online news portal | Kannada news online

ಅಂತರ್ ಜಿಲ್ಲಾ ಮೊಬೈಲ್ ಕಳ್ಳರ ಬಂಧನ ; ಆರೋಪಿಗಳಿಂದ  2.08 ಲಕ್ಷ ಮೌಲ್ಯದ ಮೊಬೈಲ್ ವಶ

ಪ್ರಮುಖ ಸುದ್ದಿ

ಅಂತರ್ ಜಿಲ್ಲಾ ಮೊಬೈಲ್ ಕಳ್ಳರ ಬಂಧನ ; ಆರೋಪಿಗಳಿಂದ  2.08 ಲಕ್ಷ ಮೌಲ್ಯದ ಮೊಬೈಲ್ ವಶ

ಡಿವಿಜಿ ಸುದ್ದಿ, ಭದ್ರಾವತಿ: ರಾಜ್ಯದ ವಿವಿಧ ಜಿಲ್ಲೆಯಲ್ಲಿ ಮೊಬೈಲ್ ಕಳ್ಳತನ ಮಾಡುತ್ತಿದ್ದ ಅಂತರ್ ಜಿಲ್ಲಾ ಕಳ್ಳರನ್ನು ಭದ್ರಾವತಿ ಗ್ರಾಮಾಂತರ  ಠಾಣೆ ಪೊಲೀಸರು ಬಂಧಿಸಿದ್ದಾರೆ.

ವಿವಿಧ ಜಿಲ್ಲೆಯಲ್ಲಿ ಮೊಬೈಲ್ ಕಳ್ಳತನ ಮಾಡಿ  ಮಾರಾಟ ಮಾಡುತಿದ್ದ ತಿಮ್ಲಾಪುರ ಕ್ಯಾಂಪ್ ವಾಸಿಗಳಾದ  ಅಬ್ದುಲ್ ಖಾದರ್ ,  ಶಫೀಕ್ ಎಂಬುವರನ್ನು ಬಂಧಿಸಲಾಗಿದೆ.  ಭದ್ರಾವತಿ ಗ್ರಾಮಾಂತರ ವೃತ್ತನಿರೀಕ್ಷಕ ಇ.ಒ. ಮಂಜುನಾಥ್ ನೇತೃತ್ವದಲ್ಲಿ ಡಿವೈಎಸ್ಪಿ ಸುಧಾಕರ ನಾಯಕ ಮಾರ್ಗದರ್ಶನದಲ್ಲಿ ಕಾರ್ಯಚರಣೆ ನಡೆಸಿ ಮೊಬೈಲ್ ಕಳ್ಳರನ್ನು ಬಂದಿಸುವಲ್ಲಿ‌ ಯಶಸ್ವಿಯಾಗಿದ್ದಾರೆ.

ಬಂಧಿತರಿಂದ‌ 2.08 ಲಕ್ಷ ಬೆಲೆ ಬಾಳುವ ವಿವಿಧ ಕಂಪನಿಗಳ ಮೊಬೈಲ್ ಗಳನ್ನು ಪೋಲಿಸರು ವಶಪಡಿಸಿಕೊಂಡಿದ್ದಾರೆ ಕಾರ್ಯಚರಣೆಯಲ್ಲಿ ಗ್ರಾಮಾಂತರ ಪೋಲಿಸ್ ಠಾಣೆ ಪಿಎಸ್ಐ ದೇವರಾಜ್ . ಸಿಬ್ಬಂದಿಗಳಾದ ನಾಗರಾಜ್ ಎಂ . ಆದರ್ಶ ಶೆಟ್ಟಿ , ಹನಮಂತ ಅಮಾತಿಭಾಗಿಯಾಗಿದ್ದರು. ಪೊಲೀಸರ ಕಾರ್ಯಚರಣೆಗೆ  ಶಿವಮೊಗ್ಗ ಜಿಲ್ಲಾ ವರಿಷ್ಠಾಧಿಕಾರಿ ಶಾಂತರಾಜ್ ಅವರು ಅಭಿನಂದಿಸಿದ್ದಾರೆ.

 

 

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top