ಡಿವಿಜಿ ಸುದ್ದಿ, ಭದ್ರಾವತಿ: ರಾಜ್ಯದ ವಿವಿಧ ಜಿಲ್ಲೆಯಲ್ಲಿ ಮೊಬೈಲ್ ಕಳ್ಳತನ ಮಾಡುತ್ತಿದ್ದ ಅಂತರ್ ಜಿಲ್ಲಾ ಕಳ್ಳರನ್ನು ಭದ್ರಾವತಿ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ವಿವಿಧ ಜಿಲ್ಲೆಯಲ್ಲಿ ಮೊಬೈಲ್ ಕಳ್ಳತನ ಮಾಡಿ ಮಾರಾಟ ಮಾಡುತಿದ್ದ ತಿಮ್ಲಾಪುರ ಕ್ಯಾಂಪ್ ವಾಸಿಗಳಾದ ಅಬ್ದುಲ್ ಖಾದರ್ , ಶಫೀಕ್ ಎಂಬುವರನ್ನು ಬಂಧಿಸಲಾಗಿದೆ. ಭದ್ರಾವತಿ ಗ್ರಾಮಾಂತರ ವೃತ್ತನಿರೀಕ್ಷಕ ಇ.ಒ. ಮಂಜುನಾಥ್ ನೇತೃತ್ವದಲ್ಲಿ ಡಿವೈಎಸ್ಪಿ ಸುಧಾಕರ ನಾಯಕ ಮಾರ್ಗದರ್ಶನದಲ್ಲಿ ಕಾರ್ಯಚರಣೆ ನಡೆಸಿ ಮೊಬೈಲ್ ಕಳ್ಳರನ್ನು ಬಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತರಿಂದ 2.08 ಲಕ್ಷ ಬೆಲೆ ಬಾಳುವ ವಿವಿಧ ಕಂಪನಿಗಳ ಮೊಬೈಲ್ ಗಳನ್ನು ಪೋಲಿಸರು ವಶಪಡಿಸಿಕೊಂಡಿದ್ದಾರೆ ಕಾರ್ಯಚರಣೆಯಲ್ಲಿ ಗ್ರಾಮಾಂತರ ಪೋಲಿಸ್ ಠಾಣೆ ಪಿಎಸ್ಐ ದೇವರಾಜ್ . ಸಿಬ್ಬಂದಿಗಳಾದ ನಾಗರಾಜ್ ಎಂ . ಆದರ್ಶ ಶೆಟ್ಟಿ , ಹನಮಂತ ಅಮಾತಿಭಾಗಿಯಾಗಿದ್ದರು. ಪೊಲೀಸರ ಕಾರ್ಯಚರಣೆಗೆ ಶಿವಮೊಗ್ಗ ಜಿಲ್ಲಾ ವರಿಷ್ಠಾಧಿಕಾರಿ ಶಾಂತರಾಜ್ ಅವರು ಅಭಿನಂದಿಸಿದ್ದಾರೆ.



