ಫೆ.22 ರಂದು 109 ಅಡಿ ಎತ್ತರದ ಬಸವೇಶ್ವರ ಮೂರ್ತಿ ಸ್ಥಾಪನೆಗೆ ಸಿಎಂ ಯಡಿಯೂರಪ್ಪ ಅಡಿಗಲ್ಲು

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಡಿವಿಜಿ ಸುದ್ದಿ, ಬೆಳಗಾವಿ:  ಫೆ. 22 ರಂದು ಹುಕ್ಕೇರಿ  ತಾಲೂಕಿನ ಕಲ್ಯಾಣ ಹೆಬ್ಬಾಳದಲ್ಲಿ 109 ಅಡಿ ಎತ್ತರದ ಬಸವೇಶ್ವರರ ಮೂರ್ತಿ ಸ್ಥಾಪನೆಯ ಅಡಿಗಲ್ಲು ಪೂಜೆಯನ್ನು ಸಿಎಂ ಯಡಿಯೂರಪ್ಪ ನೆರವೇರಿಸಲಿದ್ದಾರೆ.

ಹುಕ್ಕೇರಿಯ ತಾಲೂಕಿನ ಕ್ಲಯಾಣ ಹೆಬ್ಬಾಳದಲ್ಲಿ ಫೆ. 21 ರಿಂದ  23 ವರಗೆ  ಬಸವ ಉತ್ಸವ ನಡೆಯಲಿದ್ದು, ಈ ಉತ್ಸವದಲ್ಲಿ ಸಚಿವರು, ಕೇಂದ್ರ ಮಂತ್ರಿಗಳು ಸೇರಿದಂತೆ ಗಣ್ಯರು ಭಾಗವಹಿಸಲಿದ್ದಾರೆ. ಈ ಕುರಿತು ಹೆಬ್ಬಾಳ ಗ್ರಾಮದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಬಸವ ಉತ್ಸವ ಸಮಿತಿಯ ನೇತೃತ್ವ ವಹಿಸಿರುವ ಬಸವ ದೇವರು ಕಾರ್ಯಕ್ರಮ ಕುರಿತು ಮಾಹಿತಿ ನೀಡಿದರು.

ಉತ್ಸವದಲ್ಲಿ ನಾಡಿನ ಅನೇಕ ಮಠಾಧೀಶರು ಹಾಗೂ ಸಮಾಜದ ವಿವಿಧ ಸ್ಥರದ ಎಲ್ಲಾ ಜನಾಂಗದ ಮುಖ್ಯಸ್ಥರು ಭಾಗಿಯಾಗಲಿದ್ದಾರೆ. 22ರಂದು ಕಲ್ಯಾಣ ಹೆಬ್ಬಾಳ ಗ್ರಾಮಕ್ಕೆ ಸಿಎಂ ಯಡಿಯೂರಪ್ಪ ಆಗಮಿಸಿ 109 ಅಡಿ ಎತ್ತರದ  ಬಸವ ಮೂರ್ತಿಗೆ  ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.ಸಚಿವರಾದ ಜಗದೀಶ್ ಶೆಟ್ಟರ್, ಶಶಿಕಲಾ ಜೊಲ್ಲೆ, ಅಣ್ಣಾ ಸಾಹೇಬ್ ಜೊಲ್ಲೆ, ಸೇರಿದಂತೆ ಕೇಂದ್ರ ಸಚಿವರಾದ ಸುರೇಶ ಅಂಗಡಿ ಹಾಗೂ ಪ್ರಹ್ಲಾದ ಜೋಶಿ ಭಾಗವಹಿಸಲಿದ್ದಾರೆ ಎಂದರು.

ಬಸವರಾಜ ಪಂಡಿತ, ರಾಷ್ಟ್ರೀಯ ಬಸವ ಸೇನೆಯ ಜಿಲ್ಲಾಧ್ಯಕ್ಷಾ ಶಂಕರ ಗುಡಸ, ಎಸ್ ವಾಯ್ ಹಂಜಿ ಸಾಹಿತಿ ಚಿಕ್ಕೋಡಿ, ಬಿ.ಎಲ್ ಖೋತ, ಮಹಾಂತೇಶ ಚೌಗಲ, ಸಿದ್ದು ಪಾಟೀಲ್, ಮಹೇಶ ಕಾಡಗಿ ಸೇರಿದಂತೆ ಇತರರು ಹಾಜರಿದ್ದರು.

 

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *