ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟಿದ್ದ ಆರೋಪಿ ಆದಿತ್ಯ ರಾವ್ ಅಂದರ್

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಡಿವಿಜಿ ಸುದ್ದಿ, ಬೆಂಗಳೂರುಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿ ಆದಿತ್ಯ ರಾವ್ ಎಂಬಾತನನ್ನು ಬೆಂಗಳೂರು  ಪೊಲೀಸ್  ವಶಕ್ಕೆ ಪಡೆದಿದ್ದಾರೆ.

ಪೊಲೀಸ್ ಮಹಾನಿರ್ದೇಶಕರ ಕಚೇರಿಯಲ್ಲಿ ವಶಕ್ಕೆ ಪಡೆದಿದ್ದು, ಮಹಾ ನಿರ್ದೇಶಕರ ಕಚೇರಿಯಲ್ಲಿ ಇರಿಸಲಾಗಿದೆ. ಈ ಕುರಿತು ಕೇಂದ್ರ ವಿಭಾಗದ ಡಿಸಿಪಿ ಚೇತನ್ ಸಿಂಗ್ ರಾಥೋಡ್ ಮಾತನಾಡಿ, ಶರಣಾದ ವ್ಯಕ್ತಿಯನ್ನು ಆದಿತ್ಯ ರಾವ್ ಎಂದು ಗುರುತಿಸಲಾಗಿದೆ. ನಾನೇ ಬಾಂಬ್ ಇಟ್ಟಿರುವುದಾಗಿ ತಪ್ಪು ಒಪ್ಪಿಕೊಂಡಿದ್ದಾನೆ. ಆತನ ವೈದ್ಯಕೀಯ ಪರೀಕ್ಷೆ ನಡೆಸಲಾಗುತ್ತಿದೆ ಎಂದರು.

ಈ ಪ್ರಕರಣವನ್ನು ಮಂಗಳೂರು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಅವರು ಬೆಂಗಳೂರು ಬರುತ್ತಿದ್ದಾರೆ. ಹೆಚ್ಚಿನ ತನಿಖೆಗಾಗಿ ಆತನನ್ನು ಅವರಿಗೆ ಹಸ್ತಾಂತರಿಸಲಾಗುವುದು. ಆತ ಈ ಹಿಂದೆ ಭಾಗಿಯಾದ ಘಟನೆಗಳ ಬಗ್ಗೆ ವಿಚಾರಣೆ ಮಾಡಬೇಕಿದೆ ಎಂದರು.

ವಿಮಾನ ನಿಲ್ದಾಣದಲ್ಲಿ ಬಾಂಬ್ ಪತ್ತೆ ಪ್ರಕಾಣದ ಸಿಸಿ ಟಿವಿ ದೃಶ್ಯಗಳು ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದ್ದಂತೆ ಆದಿತ್ಯ ರಾವ್, ಮಾರುವೇಷದಲ್ಲಿ ಮಂಗಳೂರಿನಿಂದ ಲಾರಿಯಲ್ಲಿ ಬೆಂಗಳೂರಿಗೆ ತೆರಳಿದ್ದ.ನಗರದ ಚಿಲಿಂಬಿಯಲ್ಲಿ ವಾಸಿಸುತ್ತಿದ್ದ ಆದಿತ್ಯ ರಾವ್, ಕೆಲ ದಿನಗಳ ಹಿಂದೆ ಹೋಟೆಲ್ ನಲ್ಲಿ ಬಿಲ್ಲಿಂಗ್ ವಿಭಾಗದಲ್ಲಿ ಕೆಲಸಕ್ಕೆ ಸೇರಿಕೊಂಡಿದ್ದ. ಹೋಟೆಲ್‌ನಲ್ಲಿಯೇ ಬಾಂಬ್ ತಯಾರಿಸಿದ್ದ ಎಂಬ ಮಾಹಿತಿ ಪೊಲೀಸರಿಗೆ ಸಿಕ್ಕಿದೆ.

ಹೋಟೆಲ್ ಸಿಬ್ಬಂದಿಯನ್ನು ವಿಚಾರಿಸಿದಾಗ ಈ ಎಲ್ಲ ಮಾಹಿತಿ ಬಹಿರಂಗವಾಗಿವೆ. ಆನ್‌ಲೈನ್ ಮೂಲಕ ಪೌಡರ್ ತರಿಸಿದ್ದು, ಅದರಿಂದ ಬಾಂಬ್ ತಯಾರಿಸಿದ್ದ. ಹೋಟೆಲ್‌ನ ರೂಮ್‌ನಲ್ಲಿ ಬಾಂಬ್ ತಯಾರಿಕೆಗೆ ಬಳಸಿದ್ದ ಪೌಡರ್ ಪತ್ತೆಯಾಗಿದೆ. ವಿಚಿತ್ರವಾಗಿ ವರ್ತಿಸುತ್ತಿದ್ದ ಆದಿತ್ಯ ರಾವ್, ಯಾರೊಂದಿಗೂ ಹೆಚ್ಚು ಮಾತನಾಡುತ್ತಿರಲಿಲ್ಲ. ತನ್ನಷ್ಟಕ್ಕೆ ಇರುತ್ತಿದ್ದ ಎಂದು ಹೋಟೆಲ್ ಸಹೋದ್ಯೋಗಿಗಳು ತಿಳಿಸಿದ್ದಾರೆ.

ನಿನ್ನೆಯಷ್ಟೇ  ಸಿಸಿಟಿವಿ ದೃಶ್ಯಾವಳಿ‌ ಹಾಗೂ ಶಂಕಿತನ ಫೋಟೊ ಬಿಡುಗಡೆ ಮಾಡಿದ್ದ ಪೊಲೀಸರು, ಆರೋಪಿಗಾಗಿ ತೀವ್ರ ಶೋಧ ನಡೆಸಿದ್ದರು. ಎಲ್ಲ ಆಯಾಮಗಳಿಂದ ತನಿಖೆ ನಡೆಸಿದಾಗ, ಈ ಹಿಂದೆ ಇಂತಹದ್ದೇ ಪ್ರಕರಣದಲ್ಲಿ ಭಾಗಿಯಾಗಿದ್ದ ಆದಿತ್ಯ‌ರಾವ್ ಈ ಕೃತ್ಯ ಎಸಗಿರಬಹುದು ಎಂದು ಅಂದಾಜಿಸಲಾಗಿತ್ತು.

.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *