ಡಿವಿಜಿ ಸುದ್ದಿ, ಬೆಂಗಳೂರು: ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಕಂಚಿನ ಪ್ರತಿಮೆ ಸ್ಥಾಪನೆ ಮತ್ತು ಕೆಂಪೇಗೌಡರ ಹೆಸರಲ್ಲಿ ಥೀಮ್ ಪಾರ್ಕ್ ಸ್ಥಾಪನೆಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಶಂಕುಸ್ಥಾಪನೆ ನೆರೆವೇರಿಸಿದರು.

ಕೆಂಪೇಗೌಡರ 511ನೇ ಜಯಂತಿಯಂದು ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ ಗುದ್ದಲಿ ಪೂಜೆ ನಡೆಯಿತು. ಸಿಎಂ ಜೊತೆಗೆ ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡರು, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಆದಿಚುಂಚನಗಿರಿ ಮಠದ ನಿರ್ಮಲಾನಂದ ಸ್ವಾಮೀಜಿ, ಸುತ್ತೂರು ಸ್ವಾಮೀಜಿ, ಸಿದ್ದಗಂಗಾ ಮಠದ ಸಿದ್ದಲಿಂಗಾ ಸ್ವಾಮೀಜಿ, ಡಿಸಿಎಂ ಅಶ್ವತ್ಥ್ ನಾರಾಯಣ್, ಸಚಿವರಾದ ಗೋಪಾಲಯ್ಯ, ಬೈರತಿ ಬಸವರಾಜು, ಸಂಸದ ಬಚ್ಚೇಗೌಡ, ಡಿಕೆ ಸುರೇಶ್ ಶಾಸಕ ಶರತ್ ಬಚ್ಚೇಗೌಡ, ಶಾಸಕ ವಿಶ್ವನಾಥ್, ಮಾಗಡಿ ಮಂಜುನಾಥ್, ಪುನೀತ್ ರಾಜ್ಕುಮಾರ್ ಭಾಗಿಯಾಗಿದ್ದರು.
ಪೂಜೆ ನಂತರ ಮಾತನಾಡಿದ ಮಾಜಿ ಪ್ರಧಾನಿ ದೇವೇಗೌಡ, ಈ ಕಾರ್ಯಕ್ರಮದಲ್ಲಿ ಪಕ್ಷಬೇಧ ಮರೆತು ಎಲ್ಲ ರಾಜಕೀಯ ನಾಯಕರು ಉಪಸ್ಥಿತಿ ಇರೋದು ಬಹಳ ಸಂತಸ ತಂದಿದೆ. ಸರ್ಕಾರ ಶೀಘ್ರವಾಗಿ ಕಾರ್ಯಾರಂಭ ಮಾಡಲಿ ಅಂತ ಶುಭಕೋರಿದರು. ವಿದೇಶಿಗರಿಗೆ ಕೆಂಪೇಗೌಡರನ್ನು ಪರಿಚಯಿಸುವ ಕೆಲಸವನ್ನು ಸರ್ಕಾರ ಮಾಡಿದೆ. ಸಿಎಂ ಯಡಿಯೂರಪ್ಪರ ಈ ದೊಡ್ಡ ಕೆಲಸಕ್ಕೆ ಶುಭ ಹಾರೈಸುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು.
ಒಂದು ವರ್ಷದೊಳಗೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ ಬೃಹತ್ ಕೆಂಪೇಗೌಡರ ಪ್ರತಿಮೆ ನಿರ್ಮಾಣವಾಗಲಿದ್ದು, ಮುಂದಿನ ವರ್ಷ ಪ್ರತಿಮೆಯ ಆವರಣಗೊಳ್ಳಲಿದೆ.



