Connect with us

Dvgsuddi Kannada | online news portal | Kannada news online

ಡಿಜೆ ಹಳ್ಳಿ ಗಲಭೆಗೆ ಡಿಕೆಶಿ ಬೆಂಬಲ  ಇದೆ ಅನ್ನಿಸುತ್ತೆ: ಸಚಿವ ಈಶ್ವರಪ್ಪ

ಪ್ರಮುಖ ಸುದ್ದಿ

ಡಿಜೆ ಹಳ್ಳಿ ಗಲಭೆಗೆ ಡಿಕೆಶಿ ಬೆಂಬಲ  ಇದೆ ಅನ್ನಿಸುತ್ತೆ: ಸಚಿವ ಈಶ್ವರಪ್ಪ

ಡಿವಿಜಿ ಸುದ್ದಿ, ಶಿವಮೊಗ್ಗ: ಬೆಂಗಳೂರಿನ ಮತಾಂಧ ಮುಸಲ್ಮಾನರ ದಾಳಿ ಖಂಡನೀಯ.  ಈ ಘಟನೆ ನಡೆದ ಬಳಿಕ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಅವರು ಖಂಡನೆ ವ್ಯಕ್ತಪಡಿಸಿಲ್ಲ. ಇದನ್ನು ನೋಡಿದರೆ ಇಂತಹ ಮತಾಂಧ ಮುಸಲ್ಮಾನರಿಗೆ ಡಿಕೆಶಿ ಬೆಂಬಲ ಇದೆ ಅನ್ನಿಸುತ್ತದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಆರೋಪಿಸಿದರು.

ಶಿವಮೊಗ್ಗದಲ್ಲಿ ಪ್ರತಿಕ್ರಿಯಿಸಿದ ಸಚಿವರು, ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ರವರ ಮನೆಯ ದಾಳಿ, ಬೆಂಗಳೂರಿನಲ್ಲಿ ನಡೆದ ದುಷ್ಕೃತ್ಯ ಖಂಡನೀಯ. ಈ ಘಟನೆಯನ್ನು ಸಹಿಸುವುದಿಲ್ಲ.  ಇದನ್ನು ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಎನ್ನದೇ ಎಲ್ಲರೂ ಖಂಡಿಸಬೇಕಿದೆ ಎಂದರು.

dj halli

ನಾನು ಎಲ್ಲಾ ಮುಸ್ಲಿಮರು ಕೆಟ್ಟವರು ಎಂದು ಹೇಳುತ್ತಿಲ್ಲ. ಆದರೆ ಮತಾಂಧ ಮುಸಲ್ಮಾರು ಮಾತ್ರ ಇಂತಹ ದುಷ್ಕೃತ್ಯದಲ್ಲಿ ತೂಡಗಿದ್ದಾರೆ.  ಇಂತಹ ಮತಾಂಧ ಮುಸ್ಲಿಮರ ವಿರುದ್ಧ ಎಲ್ಲಾ ಪಕ್ಷಗಳು ಪಕ್ಷಾತೀತವಾಗಿ ಖಂಡಿಸಬೇಕಿದೆ ಎಂದರು.

ಪೊಲೀಸರು, ಮಾಧ್ಯಮದವರ ಮೇಲೂ ಹಲ್ಲೆ ನಡೆದಿದೆ. ಉಗ್ರಗಾಮಿಗಳನ್ನು ಸದೆಬಡೆದ ದೇಶ ಭಾರತ. ಇಂತಹ ದುಷ್ಕೃತ್ಯಗಳಿಗೆ ಎದುರುವ ಮಾತೇ ಇಲ್ಲ. ಆದರೆ ಈ ಘಟನೆ ಬಗ್ಗೆ ಕೆ.ಪಿ.ಸಿ.ಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಯಾಕೆ ಖಂಡನೆ ವ್ಯಕ್ತಪಡಿಸಿಲ್ಲ ಎಂದು ಪ್ರಶ್ನೆ ಮಾಡಿದರು.

ಡಿ.ಕೆ.ಶಿವಕುಮಾರ್ ಇಂತಹವರ ವಿರುದ್ದ ಹೇಳಿಕೆ ನೀಡಬೇಕಿತ್ತು. ಇಂತಹ ಮತಾಂಧ ಮುಸ್ಲಿಂರಿಗೆ ಡಿ.ಕೆ.ಶಿವಕುಮಾರ್ ಬೆಂಬಲವಿದೆ ಎಂದೆನ್ನಿಸುತ್ತದೆ ಎಂದು ಹೇಳಿದರು.  ಸರ್ಕಾರ ಅವರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತದೆ ಎಂದರು.

ಡಿಕೆಶಿ ಹೇಳಿದ್ದೇನು..?

ಯಾರು ಕೂಡ ಕಾನೂನು ಕೈಗೆ ತೆಗೆದುಕೊಳ್ಳುವ ಕೆಲಸ ಮಾಡಬಾರದು. ನಿನ್ನೆ ನಡೆದ ಘಟನೆಯನ್ನು ಸಂಪೂರ್ಣವಾಗಿ ಖಂಡಿಸುತ್ತೇನೆ. ಶಾಸಕರಾಗಲಿ, ಯಾರೇ ಆಗಲಿ ಅವರ ಮೇಲೆ ದಾಳಿ ಮಾಡಬಾರದು. ಪೊಲೀಸ್ ಠಾಣೆಯ ಆಸ್ತಿ- ಪಾಸ್ತಿಗೆ ಹಾನಿ ಮಾಡಿರುವುದು ಸರಿಯಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದರು.

 

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top