ಡಿವಿಜಿ ಸುದ್ದಿ , ಬೆಂಗಳೂರು: ನೈಟ್ ಕರ್ಫ್ಯೂ ಸಡಿಲಗೊಂಡ ಹಿನ್ನೆಲೆಯಲ್ಲಿ ಇಂದಿನಿಂದ ಕೆಎಸ್ ಆರ್ ಟಿಸಿ ಬಸ್ ಸಂಚಾರದ ಅವಧಿಯಲ್ಲಿ ಬದಲಾವಣೆಯಾಗಿದ್ದು, ನಾಳೆಯಿಂದ ಬೆಳಗ್ಗೆ 5 ರಿಂದ ರಾತ್ರಿ 9 ಗಂಟೆ ವರೆಗೂ ಬಸ್ ಕಾರ್ಯಾಚರಣೆ ನಡೆಸಲಿವೆ.
ಇದುವರೆಗೂ ಬೆಳಗ್ಗೆ 7 ಗಂಟೆಯಿಂದ ರಾತ್ರಿ 7 ಗಂಟೆಯವರೆಗೆ ಮಾತ್ರ ಬಿಎಂಟಿಸಿ ಬಸ್ ಸಂಚಾರಕ್ಕೆ ಅವಕಾಶ ಇತ್ತು. ಇಂದಿನಿಂದ ಬೆಳಗ್ಗೆ 5 ಗಂಟೆಯಿಂದ ರಾತ್ರಿ 9 ಗಂಟೆಯವರೆಗೂ ಕೆಎಸ್ ಆರ್ ಟಿ ಸಿ ಬಸ್ಗಳು ಓಟಾಟ ಮಾಡಲಿವೆ.. ಇದಕ್ಕೆ ಪೂರಕವಾಗಿ ಸರ್ಕಾರ ಕೂಡ ಗ್ರೀನ್ ಸಿಗ್ನಲ್ ನೀಡಿದೆ.
ಇಂದಿನಿಂದ ನೈಟ್ ಕರ್ಫ್ಯೂ ಸಮಯ ಕೂಡ ಬದಲಾವಣೆಯಾಗಿದ್ದು, ರಾತ್ರಿ 9 ಗಂಟೆಯಿಂದ ರಾತ್ರಿ 5 ಗಂಟೆಯವರಗೆ ಮಾತ್ರ ಕರ್ಫ್ಯೂ ಜಾರಿಯಾಗಿದೆ. ಹೀಗಾಗಿ ಕೆಎಸ್ ಆರ್ ಟಿಸಿ ಬಸ್ಗಳ ಸಂಚಾರ ಅವಧಿ ಕೂಡ ಬದಲಾವಣೆಯಾಗಿದೆ. ಈ ಮೂಲಕ ಪ್ರಯಾಣಿಕರು ಹೆಚ್ಚಿನ ಸಂಖ್ಯೆ ಓಡಾಡಬಹುದಾಗಿದೆ.



