Connect with us

Dvgsuddi Kannada | online news portal | Kannada news online

ಪ್ರತಿಭಟನೆ ಕೈಬಿಟ್ಟ ಬಿಸಿಯೂಟ ಕಾರ್ಯಕರ್ತರು

ಪ್ರಮುಖ ಸುದ್ದಿ

ಪ್ರತಿಭಟನೆ ಕೈಬಿಟ್ಟ ಬಿಸಿಯೂಟ ಕಾರ್ಯಕರ್ತರು

ಡಿವಿಜಿ ಸುದ್ದಿ, ಬೆಂಗಳೂರು: ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಬೆಂಗಳೂರಿಗೆ ಆಗಮಿಸಿದ್ದ ಬಿಸಿಯೂಟ ಕಾರ್ಯಕರ್ತರನ್ನು ರೈಲ್ವೆ ನಿಲ್ದಾಣದಲ್ಲಿಯೇ ತಡೆಯಲಾಗಿತ್ತು. ಪ್ರತಿಭಟನೆಗೆ ಅವಕಾಶ ನೀಡದಿದ್ದರಿಂದ  ರೈಲ್ವೆ ನಿಲ್ದಾಣದಲ್ಲಿಯೇ ಬಿಸಿಯೂಟ ಕಾರ್ಯಕರ್ತರು ಪ್ರತಿಭಟನೆಗೆ ಮುಂದಾಗಿದ್ದರು. ಶಿಕ್ಷಣ ಸಚಿವರ ನಮವಿಗೆ ಸ್ಪಂದಿಸಿದ ಪ್ರತಿಭಟನಕಾರರು ತಾತ್ಕಾಲಿಕವಾಗಿ ಪ್ರತಿಭಟನೆ ಕೈ ಬಿಟ್ಟಿದ್ದಾರೆ.

ಕನಿಷ್ಟ ಕೂಲಿ ಜಾರಿಗೆ ತರುವುದು, ನಿವೃತ್ತಿ ವೇತನ ನೀಡುವುದು, ಖಾಸಗೀಕರಣ ಕೈ ಬಿಡವುದು ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸುತ್ತಿದ್ದರು. ರಾಜ್ಯದ ವಿವಿಧ ಭಾಗದಿಂದ ಬಂದಿದ್ದ ಬಿಸಿಯೂಟ ಕಾರ್ಯಕರ್ತರು  ಬೃಹತ್ ಮಟ್ಟದಲ್ಲಿ ಪ್ರತಿಭಟನೆ ನಡೆಸುವ ಯೋಜನೆ ರೂಪಿಸಿದ್ದರು. ಆದರೆ, ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಪ್ರತಿಭಟನೆಗೆ ಅವಕಾಶ ನೀಡಿದ್ದರಿಂದ ಪ್ರತಿಭಟನೆ ರೈಲ್ವೆ ನಿಲ್ದಾಣದಲ್ಲಿಯೇ ಪ್ರತಿಭಟನೆ ನಡೆಸುತ್ತಿದ್ದರು.

ನಮ್ಮ ಪ್ರತಿಭಟನೆಗೆ ಸರ್ಕಾರ ಸ್ಪಂದಿಸುವ ವರೆಗೂ ಸ್ಥಳ ಬಿಟ್ಟು ಹೋಗಲ್ಲ ಎಂದು ರೈಲ್ವೆ ನಿಲ್ದಾಣದಲ್ಲಿಯೇ ಪ್ರಭಟನೆ ನಡೆಸುತ್ತಿದ್ದರು. ಶಿಕ್ಷಣ ಸಚಿವರ ಪರವಾಗಿ ಇಲಾಖೆಯ ಕಾರ್ಯದರ್ಶಿಗಳು ಸ್ಥಳಕ್ಕೆ ಆಗಮಿಸಿ ಪ್ರತಿಭಟನೆ ವಾಪಸ್ಸು ಪಡೆಯುವಂತೆ ಮನವೊಲಿಸಿದರು, ಪ್ರತಿಭಟನಕಾರು ಪ್ರತಿಭಟನೆ ಮುಂದುವರಿಸಿದ್ದರು. ಆಗ ಶಿಕ್ಷಣ ಸುರೇಶ್ ಕುಮಾರ್ ಅವರು, ಇದೇ ತಿಂಗಳು 13 ರಂದು ಬಿಸಿಯೂಟ ಕಾರ್ಯಕರ್ತರ ಸಭೆ ನಡೆಸುತ್ತೇವೆ ಎಂದು ಮೌಖಿಕವಾಗಿ ಆದೇಶ ಕೊಟ್ಟಿದ್ದರಿಂದ ಪ್ರತಿಭಟನೆ ವಾಪಸ್ಸು ಪಡೆದಿದ್ದಾರೆ.

ಶಿಕ್ಷಣ ಸಚಿವರ ಮನವಿಗೆ ಸ್ಪಂದಿಸಿ ಪ್ರತಿಭಟನೆ ಕೈ ಬಿಟ್ಟಿದ್ದೇವೆ. ಒಂದು ವೇಳೆ ಫೆ. 13 ರಂದು ಸಭೆಯಲ್ಲಿ ಬಿಸಿಯೂಟ ಕಾರ್ಯಕರ್ತರ ಬೇಡಿಕೆ ಈಡೇರಿಸದಿದ್ದಲ್ಲಿ ಮತ್ತೆ ಫೆ. 15 ರಂದು ಪ್ರತಿಭಟನೆ ನಡೆಸಲಾಗುವುದು ಎಂದು ಪ್ರತಿಭಟನಕಾರರು ಎಚ್ಚರಿಕೆ ನೀಡಿದರು.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top