ಡಿವಿಜಿ ಸುದ್ದಿ, ಬೆಂಗಳೂರು: ಶಿಕ್ಷಣ ಸಚಿವ ಸುರೇಶ್ ಕುಮಾರ್ ನಿರ್ದೇಶನದಂತೆ ಕೇಂದ್ರ ಸರ್ಕಾರದ ಮಾರ್ಗಸೂಚಿಯ ಹಿನ್ನೆಲೆ ಜುಲೈ 1 ರಿಂದ ಹಂತಹಂತವಾಗಿ ಶಾಲೆಗಳನ್ನು ತೆರೆಯಲು ಪೋಷಕರ ಅಭಿಪ್ರಾಯ ಸಂಗ್ರಹಕ್ಕೆ ಶಿಕ್ಷಣ ಇಲಾಖೆಯ ಆಯುಕ್ತರು ಸುತ್ತೋಲೆ ಹೊರಡಿಸಿದೆ.
ಜೂನ್ 5ರಿಂದ ರಾಜ್ಯದ ಎಲ್ಲ ಸರ್ಕಾರಿ ಶಾಲೆ ಸಿಬ್ಬಂದಿಗಳು ಕರ್ತವ್ಯಕ್ಕೆ ಹಾಜರಾಗಬೇಕು. ಜೂನ್ 8 ರಿಂದ ಶಾಲಾ ದಾಖಲಾತಿ ಪ್ರಕ್ರಿಯೆಯನ್ನು ಆರಂಭಿಸಲು ಸೂಚಿಸಲಾಗಿದೆ. ಇನ್ನು ಅನುದಾನ ರಹಿತ ಖಾಸಗಿ ಶಾಲಾ ಕಚೇರಿಗಳ ಆರಂಭಕ್ಕೂ ಅನುಮತಿ ನೀಡಲಾಗಿದೆ.
ಜುಲೈಯಲ್ಲಿ ಶಾಲೆಯನ್ನು ತೆರೆಯಲು ಜೂನ್ ತಿಂಗಳನ್ನು ಬಳಕೆ ಮಾಡಿಕೊಳ್ಳಬೇಕು. ಮುಂದಿನ ಪರಿಸ್ಥಿತಿ ನೋಡಿಕೊಂಡು ಶೈಕ್ಷಣಿಕ ಚಟುವಟಿಕೆಗಳನ್ನು ಸರ್ಕಾರದ ನಿರ್ದೇಶನದಂತೆ ಕ್ರಮ ವಹಿಸಬೇಕು. ಪೋಷಕರ ಅಭಿಪ್ರಾಯವನ್ನು ಜೂನ್ 15ರ ಒಳಗೆ ದಾಖಲಿಸಲು ಸೂಚಿಸಲಾಗಿದೆ.



