ಡಿವಿಜಿ ಸುದ್ದಿ, ದಾವಣಗೆರೆ: ಈ ಬಾರಿ ಮುಂಗಾರು ದುರ್ಬಲಗೊಂಡಿದ್ದು, ನಿರೀಕ್ಷಿತ ಪ್ರಮಾಣದಲ್ಲಿ ನೀರು ಸಂಗ್ರಹವಾಗಿಲ್ಲ. ಹೀಗಾಗಿ 2020-21 ಸಾಲಿನ ಮುಂಗಾರು ಹಂಗಾಮಿನ ಭತ್ತ ಬೆಳೆಗೆ ಹರಿಸುವುದು ಡೌಟ್ ಎನ್ನಲಾಗುತ್ತಿದೆ.
ಸದ್ಯ ಬೆಳೆಗೆ 10.308 ಟಿಎಂಸಿ ನೀರು ಲಭ್ಯವಿದ್ದು, ಮುಂಗಾರು ಹಂಗಾಮಿಗೆ 34 ದಿನಕ್ಕೆ ಆಗುವಷ್ಟು ಮಾತ್ರ ನೀರು ಸಂಗ್ರಹವಾಗಿದೆ. ಸದ್ಯದ ಪರಿಸ್ಥಿತಿಯಲ್ಲಿ 120 ದಿನ ಬೆಳೆಗಳಿಗೆ ನೀರು ಹರಿಸಲು ಸಾಧ್ಯವಿಲ್ಲ ಎಂದು ಕರ್ನಾಟಕ ನೀರಾವರಿ ನಿಗಮ ಬಿ.ಆರ್ ಪ್ರಾಜೆಕ್ಟ್ ಅಧೀಕ್ಷಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ವರ್ಷದ ಮುಂಗಾರು ಹಂಗಾಮಿನಲ್ಲಿ ಭದ್ರಾ ಜಲಾಶಯದಲ್ಲಿ 36.189 ಟಿಎಂಸಿ ನೀರು ಸಂಗ್ರಹವಾಗಿದ್ದು, ಇದರಲ್ಲಿ 7 .0484 ಟಿಎಂಸಿ ನೀರು ಕುಡಿಯುವ ನೀರಿಗೆ ಕಾಯ್ದಿರಿಸಲಾಗಿದೆ. ಜಲಚರಗಳಿಗೆ, ಅವಿಯಾಗುವ ನೀರು ಹಾಗೂ ಕುಡಿಯುವ ನೀರಿಗೆ ಒಟ್ಟು 18,832 ಟಿಎಂಸಿ ಸಂಗ್ರಹಿಸಿ ಇಡಬೇಕಿದೆ. ಹೀಗಾಗಿ ಸದ್ಯದ ಪರಿಸ್ಥಿತಿಯಲ್ಲಿ ಅರೆ ಬೆಳೆಗಳಿಗೆ ಮಾತ್ರ ನೀರು ಬಿಡಲು ಸಾಧ್ಯ ಎಂದಿದ್ದಾರೆ.
ಈಗಾಗಲೇ 2020-21 ಸಾಲಿನಲ್ಲಿ ಅಚ್ಚುಕಟ್ಟು ಪ್ರದೇಶ ವ್ಯಾಪ್ತಿಯ ಬಲದಂಡೆ ಹಾಗೂ ಎಡದಂಡೆ ನಾಲೆಗಳಲ್ಲಿ ಜು. 2022 ರಿಂದ ನೀರು ಹರಿಸಲಾಗುತ್ತಿದೆ.



