ಭದ್ರಾವತಿ ಪೊಲೀಸರಿಂದ ಮಿಂಚಿನ ಕಾರ್ಯಾಚರಣೆ: 5 ಜನ ದರೋಡೆಕೋರಿಂದ 7,ಲಕ್ಷದ ಕಾರು,  30,000 ಮೌಲ್ಯದ ಬಂಗಾರ ವಶ           

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಡಿವಿಜಿ ಸುದ್ದಿ, ಭದ್ರಾವತಿ: ಭದ್ರಾವತಿ ಗ್ರಾಮಾಂತರ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿದ್ದು, ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಹೆಚ್.ಕೆ ಜಂಕ್ಷನ್ ರಾಮಿನಕೊಪ್ಪ ಕ್ರಾಸ್ ಬಳಿ  ದರೋಡೆಕೋರರು ಮಾರಕಾಸ್ತ್ರಗಳನ್ನು ಹಿಡಿದು ದರೋಡೆಗೆ ಸಂಚು ನಡೆಸುತ್ತಿರುವ ಬಗ್ಗೆ  ಖಚಿತ ಮಾಹಿತಿಯ ಮೇರೆಗೆ  ಭದ್ರಾವತಿ  ಉಪ ವಿಭಾಗದ ಪೊಲೀಸ್ ಉಪಾಧೀಕ್ಷಕ ಸುಧಾಕರ ನಾಯ್ಕ್ ರವರ  ಮಾರ್ಗದರ್ಶನದಲ್ಲಿ, ಭದ್ರಾವತಿ ಗ್ರಾಮಾಂತರ ವೃತ್ತನಿರೀಕ್ಷಕ  ಮಂಜುನಾಥ ಇ.ಒ. ನೇತೃತ್ವದಲ್ಲಿ ದಾಳಿ ಮಾಡಿದ್ದಾರೆ.

ಹಾಸನ ಜಿಲ್ಲೆಯ ಲಯನ್‌ ಎಂ ಎನ್ ( 23)ನಿಖಿಲ್ ( 23) ಬೆಂಗಳೂರಿನ ಮಧುಸೂದ (19 )  ಅರ್ಜುನ್ (22)  ಕೌಶಿಕ್ ಕುಮಾರ್ ಸಿ (23) ಆರೋಪಿ ಗಳನ್ನು ವಶಕ್ಕೆ ಪಡೆದಿದ್ದಾರೆ. ಈ ಐದು 5 ಜನ ದರೋಡೆಕೋರಿಂದ 7,ಲಕ್ಷ  ಮೌಲ್ಯದ    ರೆನಾಲ್ಟ್ ಡಸ್ಟರ್ ಕಾರು ಮತ್ತು 30,500 ಸಾವಿರ  ಮೌಲ್ಯದ 08 ಗ್ರಾಂ ತೂಕದ ಬಂಗಾರದ ಉಂಗುರಗಳ ವಶ ಪಡೆಯಲಾಗಿದೆ.

ಇದಲ್ಲದೆ ಮಂಡ್ಯ ಜಿಲ್ಲೆಯ ಬೆಳಕವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳ್ಳತನ ಆರೋಪಿಗಳಿ  ಕೃತ್ಯಕ್ಕೆ ಬಳಸಿದ ಆಯುಧಗಳನ್ನು ವಶಕ್ಕೆ ಪಡೆಯಲಾಗಿದೆ.  ಐದು ಜನ  ದರೋಡೆಕೋರರನ್ನು ಪೋಲಿಸರು ಬಂಧಿಸಿ ನ್ಯಾಯಲಕ್ಕೆ ಹಾಜರುಪಡಿಸಿದ್ದಾರೆ. ಶಿವಮೊಗ್ಗ ಜಿಲ್ಲಾ ವರಿಷ್ಠಾದಿಕಾರಿ ಶಾಂತರಾಜ್‌ ರವರು ತಂಡವನ್ನು ಅಭಿನಂದಿಸಿದ್ದಾರೆ

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *