ನಟ ವಿಷ್ಣುವರ್ಧನ್ 10 ನೇ ಪುಣ್ಯ ಸ್ಮರಣೆ: ಸ್ಮಾರಕಕ್ಕೆ ಭಾರತಿ ವಿಷ್ಣುವರ್ಧನ್ ಪೂಜೆ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಡಿವಿಜಿ ಸುದ್ದಿ, ಮೈಸೂರು: ಸಾಹಸ ಸಿಂಹ ಡಾ. ವಿಷ್ಣುವರ್ಧನ್ ಅವರ 10ನೇ ಪುಣ್ಯ ಸ್ಮರಣೆ ಅಂಗವಾಗಿ ಮೈಸೂರಿನ ಹೊರವಲಯದ ವಿಷ್ಣು ಸ್ಮಾರಕ ಸ್ಥಳದಲ್ಲಿ ಭಾರತಿ ವಿಷ್ಣುವರ್ಧನ್ ಪೂಜೆ ಸಲ್ಲಿಸಿದರು.

ಅಭಿಮಾನಿಗಳ ಸಮ್ಮುಖದಲ್ಲಿ ಭಾರತಿ ವಿಷ್ಣುವರ್ಧನ್ ಪೂಜೆ ಸಲ್ಲಿಸಿದರು. ಪುಣ್ಯಸ್ಮರಣೆ ಅಂಗವಾಗಿ ರಕ್ತದಾನ, ಆರೋಗ್ಯ ತಪಾಸಣೆ ಕಾರ್ಯಕ್ರಮ ನಡೆಯಿತು. ಈ ವೇಳೆ ಮಾಧ್ಯಮದವರ ಜೊತೆ ಮಾತನಾಡಿದ ಭಾರತಿ ವಿಷ್ಣುವರ್ಧನ್, ಹತ್ತು ವರ್ಷಗಳ ನಂತರ ಒಳ್ಳೆಯ ದಿನಗಳು ಬಂದಿವೆ. ಇನ್ನೊಂದು ವಾರದಲ್ಲಿ ಸ್ಮಾರಕ ಜಾಗದಲ್ಲಿ ಕಟ್ಟಡ ನಿರ್ಮಾಣ ಕಾರ್ಯ ಆರಂಭವಾಗಲಿದೆ ಎಂದರು.

ವಿಷ್ಣುವರ್ಧನ್ ನಿಧನರಾಗಿ ಹತ್ತು ವರ್ಷಗಳಾಗಿದ್ದು,  ಅಭಿಮಾನಿಗಳ ಪ್ರೀತಿ, ವಿಶ್ವಾಸ ಇನ್ನು ಕಡಿಮೆಯಾಗಿಲ್ಲ. ಅವರ ಘನತೆಗೆ ಯಾವುದೇ ಧಕ್ಕೆಯಾಗಿಲ್ಲ. ವಿಷ್ಣು ಇನ್ನೂ ನಮ್ಮೊಂದಿಗೆ ಇದ್ದಾರೆ. ಸ್ಮಾರಕ ವಿಷ್ಣು ಅವರ ಕನಸು. ಸ್ಮಾರಕ ಜಾಗದಲ್ಲಿ ಜನಪರ ಕೆಲಸಗಳಾಬೇಕು ಎಂಬುದು ಅವರ ಬಯಕೆಯಾಗಿತ್ತುಎಂದರು.

ಕಟ್ಟಡದ ರೂಪುರೇಷೆ ಬಗ್ಗೆ ಮುಂದಿನ ದಿನಗಳಲ್ಲಿ ಮಾಹಿತಿ ನೀಡಲಾಗುವುದು. ಸಿಎಂ ಯಡಿಯೂರಪ್ಪ ಅವರು ಸ್ಮಾರಕ ಜಾಗದಲ್ಲಿ ಕಟ್ಟಡ ನಿರ್ಮಾಣಕ್ಕೆ ಸಹಾಯ ನೀಡುವ ಭರವಸೆ ನೀಡಿದ್ದಾರೆ ಎಂದು ತಿಳಿಸಿದರು.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *