ಬೀದರ್ ನಲ್ಲಿ ದೆಹಲಿಯ ಜಮಾತ್ ನಿಂದ ಬಂದಿದ್ದ ವ್ಯಕ್ತಿ ಸಾವು

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಡಿವಿಜಿ ಸುದ್ದಿ, ಬೀದರ್: ಬೀದರ್ ಮೂಲದ ವ್ಯಕ್ತಿಯೊಬ್ಬರು ಹೈದರಾಬಾದ್ ನಲ್ಲಿ ಸಾವನ್ನಪ್ಪಿದ್ದು, ರಾತ್ರೋ ರಾತ್ರಿ ಅಂತ್ಯಕ್ರಿಯೆ ನಡೆಸಲಾಗಿದೆ.

62 ವಯಸ್ಸಿನ ಬೀದರ್ ಮೂಲದ ವ್ಯಕ್ತಿ ಹೈದರಾಬಾದ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ ಮಾಹಿತಿ ಲಭ್ಯವಾಗಿದ್ದು, ಮೃತ ವ್ಯಕ್ತಿ ದೆಹಲಿ ಜಮಾತ್‍ನಿಂದ ಬೀದರ್‍ಗೆ ವಾಪಸ್ಸಾಗಿದ್ದರು. ಈ ವೇಳೆ ಅವರಿಗೆ ಕೊರೊನಾ ಲಕ್ಷಣಗಳು ಕಂಡು ಬಂದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ಮಾಡಲಾಗಿತ್ತು.

ಮೊದಲ ಎರಡು ವರದಿಗಳು ನೆಗೆಟಿವ್ ಬಂದಿದ್ದರಿಂದ ಅವರನ್ನು ಹೋಂ ಕ್ವಾರಂಟೈನ್ ಮಾಡಲಾಗಿತ್ತು. ಮನೆಯಲ್ಲಿ ಮತ್ತೆ ವ್ಯಕ್ತಿಯ ಆರೋಗ್ಯದಲ್ಲಿ ಏರುಪೇರಾದಾಗ ಕುಟುಂಬಸ್ಥರು ವ್ಯಕ್ತಿಯನ್ನು ಹೈದರಾಬಾದ್‍ಗೆ ಕರೆದೊಯ್ದಿದ್ದರು. ಅಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ವ್ಯಕ್ತಿ ಮೃತಪಟ್ಟಿದ್ದಾರೆ.

ಮೃತದೇಹವನ್ನು ಮತ್ತೆ ಬೀದರ್ ತಂದು ಕೊರೊನಾ ನಿಯಮದ ಮೂಲಕ ಅಂತ್ಯಕ್ರಿಯೆ ನೆರವೇರಸಲಾಗಿದೆ. ಅಂತ್ಯಕ್ರಿಯೆಯ ವೇಳೆ 15 ಮಾತ್ರ ಭಾಗಿಯಾಗಿದ್ದರು ಎಂದು ಜಿಲ್ಲಾಡಳಿತ ತಿಳಿಸಿದೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *