ಬಿಜೆಪಿ ನೋಟಿಸ್ ಗೆ ದಾಖಲೆ ಸಹಿತ ಉತ್ತರ ಕೊಡುತ್ತೇವೆ: ಡಿಕೆಶಿ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಡಿವಿಜಿ ಸುದ್ದಿ, ಮಂಗಳೂರು: ಬಿಜೆಪಿ ಎಲ್ಲ ನೋಟಿಸ್‍ಗೆ ಉತ್ತರ ನೀಡಲು ಸಿದ್ಧವಿದ್ದೇವೆ. ಹಗರಣ ನಡೆದಿದೆ ಅನ್ನೋದಕ್ಕೆ ಎಲ್ಲ ದಾಖಲೆಗಳಿವೆ. ಈ ಹಗರಣದ ತನಿಖೆಯನ್ನು ನ್ಯಾಯಾಧೀಶರು ವಿಚಾರಣೆ ಮಾಡಬೇಕು. ಎಲ್ಲಾ ಖರೀದಿ ಪ್ರಕ್ರಿಯೆ ಬಗ್ಗೆಯೂ ತನಿಖೆಯಾಗಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ಮಾತನಾಡಿದ ಅವರು, ಸರ್ಕಾರ ಕೊರೊನಾ ಹೆಣಗಳ ಮೇಲೆ ಹಣ ಮಾಡಿದೆ. ಕೊರೊನಾದ ಹೆಸರಿನಲ್ಲಿ ರಾಜ್ಯದ ಬಿಜೆಪಿ ಸರ್ಕಾರ ಭ್ರಷ್ಟಾಚಾರ ಮಾಡಿದ್ದು, 4 ಸಾವಿರ ಕೋಟಿ ರೂಪಾಯಿ ಖರ್ಚು ಮಾಡಿ ಎರಡು ಸಾವಿರ ಕೋಟಿ ರೂಪಾಯಿಯನ್ನು ಸರ್ಕಾರ ಲೂಟಿ ಮಾಡಿದೆ ಎಂದು ವಾಗ್ದಾಳಿ ಮಾಡಿದರು.

dk shivakumar and siddaramaiah e1595525522456

ನಾನು ಏನು ಮಾಡಿದ್ದೇನೆ ಎಂಬುವುದರ ಬಗ್ಗೆಯೂ ತನಿಖೆಯಾಗಲಿ. ನನ್ನ ಮೇಲೆ ಇಡಿ, ಸಿಒಡಿ, ಸಿಬಿಐ ತನಿಖೆ ಮಾಡಿದರು. ಈಗ ಗಲ್ಲು ಹಾಕೋಕೆ ಹೊರಟಿದ್ದಾರೆ. ನಾನು ಹೇಳಿದ್ದು ತಪ್ಪಾಗಿದ್ದರೆ ಸರ್ಕಾರ ನನ್ನನ್ನು ಗಲ್ಲಿಗೇರಿಸಲಿ ಎಂದು ಸವಾಲ್ ಹಾಕಿದ್ದಾರೆ.

ಸರ್ಕಾರ ನನಗೆ ಲೀಗಲ್ ನೋಟಿಸ್ ಕಳಿಸಿದೆ. ನಾನು ಅದಕ್ಕೆ ಸರಿಯಾದ ಉತ್ತರ ಕೊಡುತ್ತೇನೆ. ನಮ್ಮಲ್ಲಿ ಬೇಕಾದ ಎಲ್ಲ ದಾಖಲೆಗಳು ಇದೆ ಎಂದು ಪ್ರತಿಕ್ರಿಯಿಸಿದ್ದಾರೆ. ಕಳೆದ ವಾರ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರು ಸುದ್ದಿಗೋಷ್ಠಿ ನಡೆಸಿ ಕೊರೊನಾ ಹೆಸರಿನಲ್ಲಿ ರಾಜ್ಯ ಸರ್ಕಾರ 2 ಸಾವಿರ ಕೋಟಿಯನ್ನು ಲೂಟಿ ಮಾಡಿದೆ ಎಂದು ದಾಖಲೆ ಬಿಡುಗಡೆ ಮಾಡುವ ಮೂಲಕ ಆರೋಪ ಮಾಡಿದ್ದರು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *