Connect with us

Dvgsuddi Kannada | online news portal | Kannada news online

ಸಿದ್ದರಾಮಯ್ಯ, ಶಿವಕುಮಾರ್ ವಿರುದ್ಧ ಬಿಜೆಪಿ ಲೀಗಲ್ ನೋಟಿಸ್

ಪ್ರಮುಖ ಸುದ್ದಿ

ಸಿದ್ದರಾಮಯ್ಯ, ಶಿವಕುಮಾರ್ ವಿರುದ್ಧ ಬಿಜೆಪಿ ಲೀಗಲ್ ನೋಟಿಸ್

 ಡಿವಿಜಿ ಸುದ್ದಿ, ಬೆಂಗಳೂರು: ಕೊರೊನಾ ಕಿಟ್  ಖರೀದಿಯಲ್ಲಿ ರಾಜ್ಯ ಸರ್ಕಾರ ಮೇಲೆ  2 ಸಾವಿರ ಕೋಟಿ ರೂ. ಭ್ರಷ್ಟಾಚಾರ ಆರೋಪ ಮಾಡಿದ್ದ ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ ಬಿಜೆಪಿ ಲೀಗಲ್ ನೋಟಿಸ್ ಜಾರಿ ಮಾಡಿದೆ.

ಕಾಂಗ್ರೆಸ್ ಆರೋಪದ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಬಿಜೆಪಿ ಹೇಳಿತ್ತು. ಇದೀಗ  ನೋಟಿಸ್ ಜಾರಿ ಮಾಡಲಾಗಿದ್ದು, ಮಾಹಿತಿಯೇ ಇಲ್ಲದೇ ಹೇಗೆ 2 ಸಾವಿರ ಕೋಟಿ ಆರೋಪ ಮಾಡಿದ್ದೀರಿ ಎಂದು ನೋಟಿಸ್‍ನಲ್ಲಿ ಪ್ರಶ್ನಿಸಿದೆ.

dk shivakumar and siddaramaiah e1595525522456

ರಾಜ್ಯ ಸರ್ಕಾರದ ನಾಲ್ಕು ಇಲಾಖೆಗಳಲ್ಲಿ ಕೊರೊನಾ ಹೆಸರಿನಲ್ಲಿ ಭ್ರಷ್ಟಾಚಾರ ನಡೆದಿದೆ. ಸುಮಾರು 2 ಸಾವಿರ ಕೋಟಿ  ಅಕ್ರಮ ನಡೆದಿದೆ. ನಾವು ಸರ್ಕಾರಕ್ಕೆ ಲೆಕ್ಕಕೊಡಿ ಎಂದು ಪತ್ರ ಬರೆದರು ಮಾಹಿತಿ ನೀಡಿಲ್ಲ ಎಂದು ಕಾಂಗ್ರೆಸ್ ನಾಯಕರು ಆರೋಪಿಸಿದ್ದರು. ಸರ್ಕಾರ ಯಾವುದೇ ಮಾಹಿತಿ ನೀಡಿಲ್ಲ ಎಂದಾದರೆ 2 ಸಾವಿರ ಕೋಟಿ ರೂ. ಭ್ರಷ್ಟಾಚಾರ ನಡೆದಿದೆ ಎಂಬ ಬಗ್ಗೆ ಕಾರಣ ಹಾಗೂ ದಾಖಲೆ ನೀಡಿ, ಇಲ್ಲವಾದರೆ ನಿಮ್ಮ ಆರೋಪವನ್ನು ವಾಪಸ್ ಪಡೆದು, ಬೇಷರತ್ ಕ್ಷಮೆ ಯಾಚಿಸಿ ಎಂದು ನೋಟಿಸ್‍ನಲ್ಲಿ ಬಿಜೆಪಿ ಆಗ್ರಹಿಸಿದೆ. ಬಿಜೆಪಿಯ ಈ ಆರೋಪಕ್ಕೆ ಕಾಂಗ್ರೆಸ್ ನಾಯಕರು ಯಾವ ಪ್ರತಿಕ್ರಿಯೆ ನೀಡಲಿದ್ದಾರೆ ಎಂದು ಕಾದುನೋಡಬೇಕಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top