ಡಿವಿಜಿ ಸುದ್ದಿ, ಬೆಂಗಳೂರು: ನಗರದ ಕೆ.ಆರ್.ಪುರಂ ನಿಂದ ವೈಟ್ಫೀಲ್ಡ್ ವರೆಗೆ ಆರಂಭಗೊಂಡಿರುವ ಬಸ್ ಪ್ರಿಯಾರಿಟಿ ಲೇನ್ ಹಾಗೂ ಬಿಎಂಟಿಸಿಗೆ ನೂತನ ಅಂಬಾಸಿಡರ್ ಆಗಿ ನಟ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಆಯ್ಕೆ ಮಾಡಲಾಗಿದೆ.
ರಾಯಭಾರಿಯಾಗುವಂತೆ ಬಿಎಂಟಿಸಿಯ ಅಧ್ಯಕ್ಷ ನಂದೀಶ್ ರೆಡ್ಡಿ ಅವರ ಮನವಿಗೆ ಪುನೀತ್ ರಾಜ್ಕುಮಾರ್ ಒಪ್ಪಿ ನೀಡಿದ್ದಾರೆ. ಬಿಬಿಎಂಪಿ ಹಾಗೂ ಬೆಂಗಳೂರು ನಗರ ಪೊಲೀಸರ ಜಂಟಿ ಸಹಯೋಗದ ಮಹತ್ವಾಕಾಂಕ್ಷಿಯ ಪ್ರತ್ಯೇಕ ಬಸ್ ಪಥ (ಬಸ್ ಪ್ರಿಯಾರಿಟಿ ಲೇನ್). ಈ ಪಥ ಅಷ್ಟು ಜನಪ್ರಿಯವಾಗಿಲ್ಲ. ಈ ಬಗ್ಗೆ ಫೇಸ್ ಬುಕ್ ಹಾಗೂ ವಾಟ್ಸಾಪ್ಗಳಲ್ಲಿ ಬಿಎಂಟಿಸಿಯಿಂದ ಜಾಹೀರಾತುಗಳನ್ನು ಮಾಡಿ ಪ್ರಚಾರ ಮಾಡಲಾಗುತ್ತಿತ್ತು. ಇದೀಗ ಬಿಎಂಟಿಸಿ ಬ್ರಾಂಡ್ ಅಂಬಾಸಿಡರ್ ಆಗಲು ಪುನೀತ್ ಯಾವುದೇ ಸಂಭಾವನೆಯನ್ನು ಪಡೆಯದೆ ಒಪ್ಪಿಗೆ ನೀಡಿರುವುದು ವಿಶೇಷವಾಗಿದೆ.
ಈ ಬಗ್ಗೆ ಮಾತನಾಡಿದ ನಂದೀಶ್ ರೆಡ್ಡಿ, ಪುನೀತ್ ಒಪ್ಪಿಗೆ ನೀಡಿದ ಬಗ್ಗೆ ಸಂತಸ ವ್ಯಕ್ತ ಪಡಿಸಿದರು. ಈ ವೇಳೆ ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕಿ ಸಿ.ಶಿಕಾ, ಬಿಎಂಟಿಸಿ ಭದ್ರತೆ ಮತ್ತು ಜಾಗೃತಿ ನಿರ್ದೇಶಕ ಅನುಪಮ್ ಅಗ್ರವಾಲ್ ಉಪಸ್ಥಿತರಿದ್ದರು.