Connect with us

Dvgsuddi Kannada | online news portal | Kannada news online

ಕರ್ನಾಟಕ, ಮಹಾರಾಷ್ಟ್ರ ಗಡಿಯಲ್ಲಿ ಬಿಗುವಿನ ವಾತಾವರಣ: ಬಸ್ ಸಂಚಾರ ಸ್ಥಗಿತ

ಪ್ರಮುಖ ಸುದ್ದಿ

ಕರ್ನಾಟಕ, ಮಹಾರಾಷ್ಟ್ರ ಗಡಿಯಲ್ಲಿ ಬಿಗುವಿನ ವಾತಾವರಣ: ಬಸ್ ಸಂಚಾರ ಸ್ಥಗಿತ

ವಿಜಿ ಸುದ್ದಿ, ಚಿಕ್ಕೋಡಿ: ರಾಜ್ಯದ ಗಡಿಯಲ್ಲಿ  ಶಿವಸೇನೆಯ ಪುಂಡಾಟಿಕೆ ಮುಂದುವರಿದಿದ್ದು, ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಇದರ ಪರಿಣಾಮ ಕರ್ನಾಟಕ ಹಾಗೂ ಮಹಾರಾಷ್ಟ್ರ ನಡುವಿನ ಬಸ್ ಸಂಚಾರ ಸ್ಥಗಿತವಾಗಿದೆ.

ಬೆಳಗಾವಿ ಗಡಿ ವಿಚಾರವಾಗಿ ಮತ್ತೆ ಖ್ಯಾತೆ ತಗೆದಿರುವ ಶಿವಸೇನೆ ಕಾರ್ಯಕರ್ತರು ಬಸ್ ಗಳ ಮೇಲೆ ದಾಳಿ‌‌ ನಡೆಸುತ್ತಿದ್ದಾರೆ.‌ ಈ ಹಿನ್ನೆಲೆಯಲ್ಲಿ ಎರಡೂ ರಾಜ್ಯಗಳ ನಡುವೆ ಬಸ್ ಸಂಚಾರ ಸ್ಥಗಿತಗೊಂಡಿದ್ದು, ಪ್ರಯಾಣಿಕರು ಪರದಾಡುವಂತಾಗಿದೆ. ಮಹಾರಾಷ್ಟ್ರದ ಕೊಲ್ಲಾಪೂರದಲ್ಲಿ ಶಿವಸೇನೆಯ ಪುಂಡರು  ಪ್ರತಿಭಟನೆ ಮಾಡುತ್ತಿರುವ ಹಿನ್ನೆಲೆಯಲ್ಲಿ  ವಾಯುವ್ಯ ಕರ್ನಾಟಕ ಸಾರಿಗೆ ಬಸ್ ಗಳ ಸಂಚಾರವನ್ನು ಮುನ್ನೆಚ್ಚರಿಕೆಯ ಕ್ರಮವಾಗಿ ಬಸ್  ಸ್ಥಗಿತಗೊಳಿಸಲಾಗಿದೆ.

ಮಹಾರಾಷ್ಟ್ರ ಸಾರಿಗೆ ಸಂಸ್ಥೆಯ ಬಸ್‍ಗಳು ಕೂಡ ಸಂಚಾರ ನಿಲ್ಲಿಸಿರುವ ಕಾರಣ ಪ್ರಯಾಣಿಕರು ಸಾಕಾಷ್ಟು ಸಮಸ್ಯೆ ಎದುರಿಸುತ್ತಿದ್ದಾರೆಸಾರಿಗೆಯ ಬಸ್‍ಗಳು ಬೆಳಗಾವಿ ಜಿಲ್ಲೆಯ ನಿಪ್ಪಾಣಿ ನಗರದಲ್ಲಿ ನಿಲ್ದಾಣದಲ್ಲಿ ಅಂತಿಮಗೊಳಿಸಲಾಗಿದೆ. ಮಹಾರಾಷ್ಟ್ರದ ಸಾಂಗಲಿ, ಮೀರಜ್, ಕೊಲ್ಹಾಪುರ, ಇಚಲಕರಂಜಿ, ಮತ್ತು ಸೊಲ್ಲಾಪುರಗಳಿಗೆ ತೆರಳುತ್ತಿದ್ದ ಬಸ್ ಸಂಚಾರ ಸ್ಥತಗಿತಗೊಂಡಿದೆ.

ಕರ್ನಾಟಕ ಹಾಗೂ ಮಹಾರಾಷ್ಟ್ರ ಸಾರಿಗೆಯ ಸುಮಾರು 700 ಕ್ಕೂ ಬಸ್‍ಗಳ ಸಂಚಾರ ಸ್ಥಗಿತವಾಗಿದೆ. ಇಂದು ರಜೆ ದಿನವಾದ ಕಾರಣ ಸಾವಿರಾರು ಪ್ರಯಾಣಿಕರು ಕರ್ನಾಟಕ ಹಾಗೂ ಮಹಾರಾಷ್ಟ್ರದ ವಿವಿಧ ನಗರಗಳಿಗೆ ಪ್ರಯಾಣ ಬೆಳೆಸಲು ಪರದಾಡುತ್ತಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top