ಡಿವಿಜಿ ಸುದ್ದಿ, ಬೆಂಗಳೂರು: ಬ್ರಾಹ್ಮಣ ಸಮುದಾಯಕ್ಕೂ ಇನ್ಮಂದೆ ಜಾತಿ ಹಾಗೂ ಆದಾಯ ಪ್ರಮಾಣ ಪತ್ರವನ್ನು ನೀಡಲು ರಾಜ್ಯ ಸರ್ಕಾರ ಆದೇಶ ಪ್ರಕಟಿಸಿದೆ.
ಬ್ರಾಹ್ಮಣ ಸಮುದಾಯದವರಿಗೆ ಶಿಕ್ಷಣ, ಉದ್ಯೋಗ, ಕೌಶಲ್ಯ ಅಭಿವೃದ್ಧಿ, ಸ್ವಯಂ ಉದ್ಯೋಗ ಹಾಗೂ ಇತರೇ ಸೌಲಭ್ಯಗಳನ್ನು ಪಡೆಯಲು ಅನುಕೂಲವಾಗುವಂತೆ ಜಾತಿ ಹಾಗೂ ಆದಾಯ ಪ್ರಮಾಣ ಪತ್ರವನ್ನು ನೀಡಲು ಸರ್ಕಾರಿ ಆದೇಶ ಹೊರಡಿಸಲಾಗಿದೆ ಎಂದು ಗೋವಿಂದ ಎಂ ಕಾರಜೋಳ ತಿಳಿಸಿದ್ದಾರೆ.

ಆರ್ಥಿಕವಾಗಿ ಹಿಂದುಳಿದ ಎಲ್ಲಾ ಸಮುದಾಯದವರ ಶ್ರೇಯೋಭಿವೃದ್ಧಿಯ ಹಿತದೃಷ್ಠಿಯಿಂದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ನೇತೃತ್ವದ ನಮ್ಮ ಸರ್ಕಾರ ಮಹತ್ವದ ನಿರ್ಧಾರ ತಗೆದುಕೊಂಡಿದೆ.
ರಾಜ್ಯದಲ್ಲಿ ಕೇಂದ್ರ ಸರ್ಕಾರದ ಈ ಆದೇಶದ ಅನುಷ್ಟಾನಕ್ಕಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯದವರಿಗೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರವನ್ನು ನೀಡಲು ಸರ್ಕಾರ ಆದೇಶ ಹೊರಡಿಸುವ ಮೂಲಕ ನಮ್ಮ ಸರ್ಕಾರ ನುಡಿದಂತೆ ನಡೆದಿದೆ. ಆರ್ಥಿಕವಾಗಿ ಹಿಂದುಳಿದ ಎಲ್ಲಾ ವರ್ಗಗಳ ಕಲ್ಯಾಣ ನಮ್ಮ ಸರ್ಕಾರದ ಉದ್ದೇಶವಾಗಿದೆ ಎಂದು ತಿಳಿಸಿದರು.
ಹಿಂದುಳಿದ ಅರ್ಹ ಬ್ರಾಹ್ಮಣರಿಗೆ ಸೂಕ್ತ ಜಾತಿ ಹಾಗೂ ಆದಾಯ ಪ್ರಮಾಣ ಪತ್ರವನ್ನು ನೀಡಲು ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಕಂದಾಯ ಇಲಾಖೆಯು ಆದೇಶ ಹೊರಡಿಸಿದೆ. ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ವಿವಿಧ ಯೋಜನೆಗಳಿಗೆ ಫಲಾನುಭವಿಗಳನ್ನು ಆಯ್ಕೆ ಮಾಡುವ ಸಂದರ್ಭದಲ್ಲಿ ಈ ಪ್ರಮಾಣ ಪತ್ರಗಳನ್ನು ಪರಿಗಣಿಸಲು ಅನುಮತಿ ನೀಡಲಾಗಿದೆ ಎಂದು ತಿಳಿಸಿದ್ದಾರೆ.



