ಯಡಿಯೂರಪ್ಪ ಅವರು ರಾಜ್ಯಸಭಾ ಸ್ಥಾನ ನೀಡುವ ಭರವಸೆ ಈಡೇರಿಸಲಿ : ರಮೇಶ್ ಕತ್ತಿ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಡಿವಿಜಿ ಸುದ್ದಿ, ಬೆಳಗಾವಿ:  ಕಳೆದ ವರ್ಷ ಲೋಕಸಭಾ ಟಿಕೆಟ್‌ ತಪ್ಪಿದ ವೇಳೆ ಸಂಧಾನ ಮಾಡಲು  ಬಂದಿದ್ದ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ರಾಜ್ಯಸಭಾ ಸ್ಥಾನ ನೀಡಿದ ಭರವಸೆಯನ್ನು ಈಡೇರಿಸಲಿ ಎಂದು ರಮೇಶ ಕತ್ತಿ ಹೇಳಿದರು.

ತಮ್ಮ ನಿವಾಸದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ರಾಜ್ಯಸಭಾ ಸ್ಥಾನ ತೆರವುಗೊಳ್ಳುತ್ತಿದ್ದು, ಸದ್ಯದಲ್ಲಿಯೇ ಚುನಾವಣೆ ನಡೆಯಲಿದೆ. ಈ ಸ್ಥಾನಕ್ಕೆ ನನ್ನನ್ನು ಪರಿಗಣಿಸಬೇಕುಎಂದು ಹೇಳಿದರು.

ಲಾಕ್‌ಡೌನ್‌ದಿಂದಾಗಿ ಉತ್ತರ ಕರ್ನಾಟಕದ ಶಾಸಕರ ಜೊತೆ ಬಹಳ ದಿನಗಳಿಂದ ಭೇಟಿಯಾಗಲು ಸಾಧ್ಯವಾಗಿರಲಿಲ್ಲ. ಅದಕ್ಕಾಗಿ ಮೊನ್ನೆ ಅಣ್ಣ ಉಮೇಶ ಕತ್ತಿ ಅವರಿಗಾಗಿ ಊಟಕ್ಕೆ ವ್ಯವಸ್ಥೆ  ಮಾಡಿದ್ದರು. ಈ ಔತಣಕೂಟಕ್ಕೆ ಯಡಿಯೂರಪ್ಪ ಅವರನ್ನೂ ಕರೆದಿದ್ದೇವು ಎಂದು ನುಡಿದರು.

ಅಣ್ಣ ಉಮೇಶ ಕತ್ತಿ ಅವರಿಗೆ ಅವರದ್ದೇ ಆದ ಸಾಮರ್ಥ್ಯವಿದೆ. ಇವತ್ತಿಲ್ಲ ನಾಳೆ, ಅಥವಾ ಒಂದು ವರ್ಷ ಬಿಟ್ಟಾದರೂ ಅವರು ಸಚಿವರಾಗುತ್ತಾರೆ. ಅದರಲ್ಲಿ ಎರಡು ಮಾತಿಲ್ಲ. ಆದರೆ, ನನ್ನ ರಾಜಕೀಯ ಭವಿಷ್ಯವೇನು? ಲೋಕಸಭಾ ಟಿಕೆಟ್‌ ಕೈ ತಪ್ಪಿ ಹೋಗಿದೆ. ಯಾಕೆ ತಪ್ಪಿತು ಎನ್ನುವುದನ್ನು ಯಾರೂ ಹೇಳುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *