ಡಿವಿಜಿ ಸುದ್ದಿ, ಬೆಳಗಾವಿ: ಕಳೆದ ವರ್ಷ ಲೋಕಸಭಾ ಟಿಕೆಟ್ ತಪ್ಪಿದ ವೇಳೆ ಸಂಧಾನ ಮಾಡಲು ಬಂದಿದ್ದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ರಾಜ್ಯಸಭಾ ಸ್ಥಾನ ನೀಡಿದ ಭರವಸೆಯನ್ನು ಈಡೇರಿಸಲಿ ಎಂದು ರಮೇಶ ಕತ್ತಿ ಹೇಳಿದರು.
ತಮ್ಮ ನಿವಾಸದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ರಾಜ್ಯಸಭಾ ಸ್ಥಾನ ತೆರವುಗೊಳ್ಳುತ್ತಿದ್ದು, ಸದ್ಯದಲ್ಲಿಯೇ ಚುನಾವಣೆ ನಡೆಯಲಿದೆ. ಈ ಸ್ಥಾನಕ್ಕೆ ನನ್ನನ್ನು ಪರಿಗಣಿಸಬೇಕುಎಂದು ಹೇಳಿದರು.
ಲಾಕ್ಡೌನ್ದಿಂದಾಗಿ ಉತ್ತರ ಕರ್ನಾಟಕದ ಶಾಸಕರ ಜೊತೆ ಬಹಳ ದಿನಗಳಿಂದ ಭೇಟಿಯಾಗಲು ಸಾಧ್ಯವಾಗಿರಲಿಲ್ಲ. ಅದಕ್ಕಾಗಿ ಮೊನ್ನೆ ಅಣ್ಣ ಉಮೇಶ ಕತ್ತಿ ಅವರಿಗಾಗಿ ಊಟಕ್ಕೆ ವ್ಯವಸ್ಥೆ ಮಾಡಿದ್ದರು. ಈ ಔತಣಕೂಟಕ್ಕೆ ಯಡಿಯೂರಪ್ಪ ಅವರನ್ನೂ ಕರೆದಿದ್ದೇವು ಎಂದು ನುಡಿದರು.
ಅಣ್ಣ ಉಮೇಶ ಕತ್ತಿ ಅವರಿಗೆ ಅವರದ್ದೇ ಆದ ಸಾಮರ್ಥ್ಯವಿದೆ. ಇವತ್ತಿಲ್ಲ ನಾಳೆ, ಅಥವಾ ಒಂದು ವರ್ಷ ಬಿಟ್ಟಾದರೂ ಅವರು ಸಚಿವರಾಗುತ್ತಾರೆ. ಅದರಲ್ಲಿ ಎರಡು ಮಾತಿಲ್ಲ. ಆದರೆ, ನನ್ನ ರಾಜಕೀಯ ಭವಿಷ್ಯವೇನು? ಲೋಕಸಭಾ ಟಿಕೆಟ್ ಕೈ ತಪ್ಪಿ ಹೋಗಿದೆ. ಯಾಕೆ ತಪ್ಪಿತು ಎನ್ನುವುದನ್ನು ಯಾರೂ ಹೇಳುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು



