ಅಪಘಾತವಾದ ಕಾರಿನಲ್ಲಿ ಸಚಿವರ ಪುತ್ರ  ಇರಲಿಲ್ಲ: ಎಸ್ಪಿ ಸಿ.ಕೆ. ಬಾಬಾ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
2 Min Read

ಡಿವಿಜಿ ಸುದ್ದಿ, ಬಳ್ಳಾರಿ/ಬೆಂಗಳೂರು: ಹೊಸಪೇಟೆ ಸಮೀಪ ಕಾರು ಅಪಘಾತವಾದಲ್ಲಿ ಸಚಿವ ಅಶೋಕ್ ಪುತ್ರ ಶರತ್ ಇರಲಿಲ್ಲ ಎಂದು ಎಸ್‍ಪಿ ಸಿ.ಕೆ. ಬಾಬಾ ಅವರು ಸ್ಪಷ್ಟಪಡಿಸಿದ್ದಾರೆ.

ಫೆಬ್ರವರಿ 10 ರಂದು ಮಧ್ಯಾಹ್ನ ಮರಿಯಮ್ಮನ ಹಳ್ಳಿ ಬಳಿ ಅಪಘಾತ ನಡೆದಿದ್ದು, ಮರ್ಸಿಡೀಜ್ ಬೆಂಜ್ ಕಾರನಿಂದ ಅಪಘಾತ ಮಾಡಲಾಗಿದೆ. ಸಚಿವ ಆರ್ ಅಶೋಕ್ ಅವರ ಪುತ್ರ ವಾಹನದಲ್ಲಿ ಇರಲಿಲ್ಲ. ಯಾವುದೇ ಕಾರಣಕ್ಕೂ ನಾವು ಈ ಪ್ರಕರಣದಲ್ಲಿ ಕರ್ತವ್ಯ ಲೋಪ ಎಸಗಿಲ್ಲ. ಘಟನೆ ನಡೆಯುತ್ತಿದ್ದಂತೆ ಪೊಲೀಸರು ಅಗತ್ಯ ಕ್ರಮ ಕೈಗೊಂಡಿದ್ದಾರೆ. ಸಿಸಿಟಿವಿ ದೃಶ್ಯ ಪರಿಶೀಲನೆ ನಡೆಯುತ್ತಿದೆ ಎಂದಿದ್ದಾರೆ.

ಅಪಘಾತ ನಡೆದ ದಿನ ಯುವಕ ರಾಹುಲ್ ಕಾರು ಓಡಿಸುತ್ತಿದ್ದ. ಕಾರಿನಲ್ಲಿದ್ದ ಐವರಲ್ಲಿ ಸಚಿನ್ ಮೃತಪಟ್ಟಿದ್ದಾರೆ. ಗ್ರಾಮದ ರವಿ ನಾಯಕ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಎಫ್‍ಐಆರ್ ದಾಖಲಿಸುವ ವೇಳೆ ಹೆಸರನ್ನು ತಪ್ಪಾಗಿ ದಾಖಲಿಸಲಾಗಿದೆ. ಕಾರು ಯಾರಿಗೆ ಸೇರಿದ್ದು ಎಂಬುವುದು ತನಿಖೆ ನಡೆಸಲಾಗುತ್ತೆ ಎಂದರು.

ಮೂರು ದಿನಗಳ ಹಿಂದೆ ಕೆಎ-05, ಎಂಡಬ್ಲ್ಯು 357 ನಂಬರಿನ ಬೆಂಜ್ ಕಾರು ಬಳ್ಳಾರಿಯ ಹೊಸಪೇಟೆ ತಾಲೂಕಿನ ಮರಿಯಮ್ಮನಹಳ್ಳಿಯಲ್ಲಿ ಇಬ್ಬರ ಬಲಿಯನ್ನು ತೆಗೆದುಕೊಂಡಿತ್ತು. ದುರ್ಗಾ ಪೆಟ್ರೋಲ್ ಬಂಕ್ ಬಳಿ ರಾಷ್ಟ್ರೀಯ ಹೆದ್ದಾರಿ 50ರ ಸೇತುವೆ ಮೇಲಿನಿಂದ ವೇಗದಲ್ಲಿ ಬಂದ ಕಾರು, ರಸ್ತೆ ಪಕ್ಕದ ಚಹಾ ಅಂಗಡಿ ಬಳಿ ನಿಂತಿದ್ದ ರವಿ ನಾಯಕ್(19) ಅವರಿಗೆ ಗುದ್ದಿದ ಪರಿಣಾಮ ಸ್ಥಳದಲ್ಲಿಯೇ ಮೃತಪಟ್ಟಿದ್ದ.ಈ ಅಪಘಾತದಲ್ಲಿ ಕಾರಿನಲ್ಲಿದ್ದ ಮತ್ತೀಕೆರೆ ನಿವಾಸಿ ಸಚಿನ್ ಎಂಬುವನು ಮೃತಪಟ್ಟಿದ್ದ.

ಸಚಿವ ಆರ್ .ಅಶೋಕ್ ಹೇಳದೇನು ..?

ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‍ಐಆರ್ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ. ಪ್ರಕರಣ ತನಿಖಾ ಹಂತದಲ್ಲಿ ಇರೋದರಿಂದ ಮಂತ್ರಿಯಾಗಿರುವುದರಿಂದ ಹೆಚ್ಚು ಮಾತನಾಡಬಾರದು. ತನಿಖೆ ವೇಳೆ ಹೇಳಿಕೆ ನೀಡಿದ್ರೆ ಕಾನೂನಿನ ಪ್ರಕಾರ ಸರಿ ಅಲ್ಲ. ಕಾನೂನು ಮೀರಿ ಯಾರು ಇಲ್ಲ. ತನಿಖೆ ವೇಳೆ ತಪ್ಪಿತಸ್ಥರ ವಿರುದ್ಧ ಅಧಿಕಾರಿಗಳು ಕ್ರಮಕೈಗೊಳ್ಳುತ್ತಾರೆ ಎಂದರು.

ಅಪಘಾತವಾದ ಕಾರಿಗೂ ಹಾಗೂ ಅದು ನೋಂದಣಿ ಹೊಂದಿರುವ ಸಂಸ್ಥೆಗೂ ನಮಗೆ ಸಂಬಂಧವಿಲ್ಲ. ಅಪಘಾತಕ್ಕೆ ಸಂಬಂಧಿಸಿದಂತೆ ಪರ ಮತ್ತು ವಿರೋಧ ಮಾತನಾಡಲ್ಲ. ಮಾಧ್ಯಮಗಳಲ್ಲಿ ನನ್ನ ಮಗ ಸಹ ಕಾರಿನಲ್ಲಿದ್ದ ಎಂದು ಬರುತ್ತಿದೆ. ಈ ಬಗ್ಗೆ ನಾನು ಯಾವುದೇ ಹೇಳಿಕೆ ನೀಡಲ್ಲ ಎಂದಿದ್ದಾರೆ.

.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *