ಕೊರೊನಾ ನಿಭಾಯಿಸುವಲ್ಲಿ ಕೇಂದ್ರ ಸರ್ಕಾರ ವಿಫಲ: ಡಿ.ಕೆ ಶಿವಕುಮಾರ್

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಡಿವಿಜಿ ಸುದ್ದಿ, ಬೆಂಗಳೂರು: ಕೊರೊನಾ ವಿರುದ್ಧದ ಹೋರಾಟಕ್ಕೆ ಕೇಂದ್ರ ಸರ್ಕಾರದ ಬಳಸಿದ ಲಾಕ್ ಡೌನ್ ತಂತ್ರ ಸಂಪೂರ್ಣ ವಿಫಲವಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾವು ಸಹ ಅಡಳಿತ ಪಕ್ಷಕ್ಕೆ ಸಹಕಾರ ಕೊಟ್ಟಿದ್ದೇವೆ. ಯಾವ ವಿಷಯದಲ್ಲೂ ಮಾತುಕತೆ ಇಲ್ಲ. ವ್ಯವಹಾರದ ಜ್ಞಾನ ಇಲ್ಲದವರಿಂದಾಗಿ ಈ ಪರಿಸ್ಥಿತಿ ಬಂದಿದೆ ಎಂದು ಟೀಕಿಸಿದರು

ಪ್ರತಿಭಟನೆ ಮಾಡುವಂತೆ ಮಾಡಿದ್ದೇ ಸಾಧನೆ

ದೇಶದಲ್ಲಿ ಜನರಲ್ಲಿ ಭಯದ ವಾತಾವರಣ ನಿರ್ಮಿಸಿ ಪ್ರತಿಭಟನೆ ಮಾಡುವಂತೆ ಮಾಡಿದ್ದೇ ಕೇಂದ್ರ ಸರ್ಕಾರದ ಒಂದು ವರ್ಷದ ಸಾಧನೆ. ಪೆಟ್ರೋಲ್ ಬೆಲೆ ಜಾಗತಿಕ ಮಟ್ಟದಲ್ಲಿ ಭಾರಿ ಪ್ರಮಾಣದಲ್ಲಿ ಕುಸಿದಿದ್ದರೂ, ಅದರ ಲಾಭವನ್ನು ಜನರಿಗೆ ಸಿಗದಂತೆ ಮಾಡಲಾಗಿದೆ. ಆರ್ಥಿಕ ವಿಷಯದಲ್ಲೂ ಸರ್ಕಾರ ಕೊರೊನಾ ಬರುವುದಕ್ಕೆ ಮೊದಲೇ ಭಾರಿ ವಿಫಲವಾಗಿತ್ತು ಎಂದರು.

ನಿರುದ್ಯೋಗದ ಪ್ರಮಾಣ ಶೇ 24ರಷ್ಟಿದೆ. ಜಿಡಿಪಿ ಪ್ರಮಾಣ ಸಹ ಭಾರಿ ಕುಸಿತ ಕಂಡಿದೆ. ಕೈಗಾರಿಕೆಗಳಿಗೆ ನಿರ್ಲಕ್ಷ್ಯ ತೋರಿದೆ. ಒಟ್ಟಾರೆ ಇಡೀ ದೇಶ ಅಭಿವೃದ್ಧಿಯಲ್ಲಿ ಹಿಂದೆ ಉಳಿದಿದೆ. ಯಾವುದೇ ಸ್ಪಷ್ಟ ಯೋಜನೆ ಇಲ್ಲ. ಸಂಸದರ ಮಾದರಿ ಗ್ರಾಮಕ್ಕೆ ದುಡ್ಡನ್ನೇ ಕೊಟ್ಟಿಲ್ಲ ಎಂದರು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *