Connect with us

Dvgsuddi Kannada | online news portal | Kannada news online

ಕೊರೊನಾ ನಿಭಾಯಿಸುವಲ್ಲಿ ಕೇಂದ್ರ ಸರ್ಕಾರ ವಿಫಲ: ಡಿ.ಕೆ ಶಿವಕುಮಾರ್

ಪ್ರಮುಖ ಸುದ್ದಿ

ಕೊರೊನಾ ನಿಭಾಯಿಸುವಲ್ಲಿ ಕೇಂದ್ರ ಸರ್ಕಾರ ವಿಫಲ: ಡಿ.ಕೆ ಶಿವಕುಮಾರ್

ಡಿವಿಜಿ ಸುದ್ದಿ, ಬೆಂಗಳೂರು: ಕೊರೊನಾ ವಿರುದ್ಧದ ಹೋರಾಟಕ್ಕೆ ಕೇಂದ್ರ ಸರ್ಕಾರದ ಬಳಸಿದ ಲಾಕ್ ಡೌನ್ ತಂತ್ರ ಸಂಪೂರ್ಣ ವಿಫಲವಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾವು ಸಹ ಅಡಳಿತ ಪಕ್ಷಕ್ಕೆ ಸಹಕಾರ ಕೊಟ್ಟಿದ್ದೇವೆ. ಯಾವ ವಿಷಯದಲ್ಲೂ ಮಾತುಕತೆ ಇಲ್ಲ. ವ್ಯವಹಾರದ ಜ್ಞಾನ ಇಲ್ಲದವರಿಂದಾಗಿ ಈ ಪರಿಸ್ಥಿತಿ ಬಂದಿದೆ ಎಂದು ಟೀಕಿಸಿದರು

ಪ್ರತಿಭಟನೆ ಮಾಡುವಂತೆ ಮಾಡಿದ್ದೇ ಸಾಧನೆ

ದೇಶದಲ್ಲಿ ಜನರಲ್ಲಿ ಭಯದ ವಾತಾವರಣ ನಿರ್ಮಿಸಿ ಪ್ರತಿಭಟನೆ ಮಾಡುವಂತೆ ಮಾಡಿದ್ದೇ ಕೇಂದ್ರ ಸರ್ಕಾರದ ಒಂದು ವರ್ಷದ ಸಾಧನೆ. ಪೆಟ್ರೋಲ್ ಬೆಲೆ ಜಾಗತಿಕ ಮಟ್ಟದಲ್ಲಿ ಭಾರಿ ಪ್ರಮಾಣದಲ್ಲಿ ಕುಸಿದಿದ್ದರೂ, ಅದರ ಲಾಭವನ್ನು ಜನರಿಗೆ ಸಿಗದಂತೆ ಮಾಡಲಾಗಿದೆ. ಆರ್ಥಿಕ ವಿಷಯದಲ್ಲೂ ಸರ್ಕಾರ ಕೊರೊನಾ ಬರುವುದಕ್ಕೆ ಮೊದಲೇ ಭಾರಿ ವಿಫಲವಾಗಿತ್ತು ಎಂದರು.

ನಿರುದ್ಯೋಗದ ಪ್ರಮಾಣ ಶೇ 24ರಷ್ಟಿದೆ. ಜಿಡಿಪಿ ಪ್ರಮಾಣ ಸಹ ಭಾರಿ ಕುಸಿತ ಕಂಡಿದೆ. ಕೈಗಾರಿಕೆಗಳಿಗೆ ನಿರ್ಲಕ್ಷ್ಯ ತೋರಿದೆ. ಒಟ್ಟಾರೆ ಇಡೀ ದೇಶ ಅಭಿವೃದ್ಧಿಯಲ್ಲಿ ಹಿಂದೆ ಉಳಿದಿದೆ. ಯಾವುದೇ ಸ್ಪಷ್ಟ ಯೋಜನೆ ಇಲ್ಲ. ಸಂಸದರ ಮಾದರಿ ಗ್ರಾಮಕ್ಕೆ ದುಡ್ಡನ್ನೇ ಕೊಟ್ಟಿಲ್ಲ ಎಂದರು.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top