ಏ. 8ರೊಳಗೆ ಜನ್ ಧನ್ ಖಾತೆಗೆ 500, ಕಿಸಾನ್ ಸನ್ಮಾನ್ ಖಾತೆಗೆ 2 ಸಾವಿರ ಜಮೆ..!

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
2 Min Read

ಡಿವಿಜಿ ಸುದ್ದಿ, ದಾವಣಗೆರೆ: ಕೊರೊನಾ ಸೋಂಕು ನಿಯಂತ್ರಣ ಹಿನ್ನೆಲೆ ಘೋಷಿಸಲಾಗಿರುವ ಲಾಕ್‍ಡೌನ್ ವೇಳೆ ಜನತೆಗೆ ಅಗತ್ಯವಸ್ತುಗಳು, ಕೃಷಿ, ಮಾರುಕಟ್ಟೆ ಸೇರಿದಂತೆ ಎಲ್ಲ ವ್ಯವಸ್ಥೆಗಳ ನಿರ್ವಹಣೆಯಲ್ಲಿ ಜಿಲ್ಲಾಡಳಿತ ಸಮತೋಲನ ಸಾಧಿಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿವಿ ಜಯಭಾಸ್ಕರ್ ತಿಳಿಸಿದರು.

ಎಲ್ಲಾ ಜಿಲ್ಲೆಗಳ ಡಿಸಿ, ಎಸ್‍ಪಿ ಮತ್ತು ಸಿಇಓ ಗಳೊಂದಿಗೆ ವಿಡಿಯೋ ಕಾನ್ಫರೆನ್ಮಾತನಾಡಿ, ಕೊರೊನಾ ಲಾಕ್‍ಡೌನ್ ಹಿನ್ನೆಲೆ ದೇಶಾದ್ಯಂತ ಬಡಜನತೆ, ರೈತರು ಸೇರಿದಂತೆ ಜನರಿಗೆ ಅನೇಕ ಅನಾನುಕೂಲತೆಗಳಾಗಿದ್ದು, ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಯೋಜನೆಯಡಿ ವಿವಿಧ ಸೌಲಭ್ಯಗಳನ್ನು ಏಪ್ರಿಲ್ 7 ಮತ್ತು 8 ರೊಳಗೆ ನೀಡುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಸೂಚಿಸಿದ್ದಾರೆ.

ರೈತರು ಮತ್ತು ಸಾಮಾನ್ಯ ಜನತೆಯ ಹಣದ ಕೊರತೆ ನೀಗಿಸಲು ಇದೇ ಏಪ್ರಿಲ್ 7 ಮತ್ತು 8 ರೊಳಗೆ ಜನ್‍ಧನ್ ಖಾತೆಗೆ ರೂ.500 ಮತ್ತು ಕಿಸಾನ್ ಸಮ್ಮಾನ್ ಯೋಜನೆಯಡಿ ನೋಂದಾಯಿತ ರೈತರಿಗೆ ರೂ.2000 ಗಳನ್ನು ಜಮೆ ಮಾಡಲಾರುವುದು. ಈ ನಿಟ್ಟಿನಲ್ಲಿ ಬ್ಯಾಂಕುಗಳಿಗೆ ಜನರು ಬಂದು ಸಂದಣಿಯಾಗದಂತೆ ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಜಿಲ್ಲಾ ಬ್ಯಾಂಕರ್ಸ್ ಅಸೋಸಿಯೇಷನ್ ಜೊತೆ ಸಭೆ ನಡೆಸಿ ಸಮರ್ಪಕ ನಿರ್ವಹಣೆ ಮಾಡಬೇಕೆಂದು ಸೂಚನೆ ನೀಡಿದರು.

ಕೋವಿಡ್ ಆಸ್ಪತ್ರೆಗಳಲ್ಲಿ ಅಗತ್ಯ ಆಕ್ಸಿಜನ್ ಸಿಲಿಂಡರ್‍ಗಳು ಇರುವಂತೆ ನೋಡಿಕೊಳ್ಳಬೇಕು. ಹಾಗೂ ಆರೋಗ್ಯ ಸಿಬ್ಬಂದಿಗಳಿಗೆ ಸಾಕಷ್ಟು ಪಿಪಿಇ ಕಿಟ್‍ಗಳು ಶೀಘ್ರದಲ್ಲಿ ಲಭ್ಯವಾಗಲಿವೆ ಎಂದರು.

ವಲಸೆ ಶಿಬಿರಗಳಲ್ಲಿರುವ ವಲಸಿಗರಿಗೆ ಜಿಲ್ಲಾಡಳಿತದ ವತಿಯಿಂದ ಉತ್ತಮ ಆಹಾರ, ಔಷಧೋಪಚಾರದೊಂದಿಗೆ ಎಸ್‍ಡಿಆರ್‍ಎಫ್ ನಿಧಿಯಿಂದ ಬಟ್ಟೆ ವ್ಯವಸ್ಥೆಯನ್ನು ಸಹ ಮಾಡಬಹುದು. ಹಾಗೂ ಹಾಲು ಕೊಡುವ ವ್ಯವಸ್ಥೆಯನ್ನು ಸಹ ಮಾಡಲಾಗುವುದು. ಇವರಿಗೆ ನೈತಿಕ ಬೆಂಬಲವಾಗಿ ಜಿಲ್ಲೆಯ ಮಾನಸಿಕ ಆರೋಗ್ಯ ವಿಭಾಗದ ಆಪ್ತ ಸಮಾಲೋಚಕರಿಂದ ಆಪ್ತಸಮಾಲೋಚನೆ ಹಾಗೂ ವಿವಿಧ ಧಾರ್ಮಿಕ ಗುರುಗಳಿಂದ ಆಪ್ತಸಮಾಲೋಚನೆ ನಡೆಸಬೇಕು ಎಂದರು.

ಹೈವೇಗಳಲ್ಲಿ ಮತ್ತು ಚೆಕ್‍ಪೋಸ್ಟ್‍ಗಳಲ್ಲಿ ಯಾವುದೇ ಅಂತರ ರಾಜ್ಯ ಮತ್ತು ರಾಜ್ಯದೊಳಗಿನ ಸರಕು ವಾಹನಗಳು ಮತ್ತು ಸರಕು ಅನ್‍ಲೋಡ್ ಮಾಡಿಬಂದ ಖಾಲಿ ವಾಹನಗಳಿಗೆ ಅಡ್ಡಿಪಡಿಸಬಾರದು ಎಂದರು.

ರೈತರು ಮತ್ತು ಗ್ರಾಹಕರ ಹಿತದೃಷ್ಟಿಯಿಮದ ಕಿರಾಣಿ ಅಂಗಡಿಗಳು, ಹಾಪ್‍ಕಾಮ್‍ಗಳನ್ನು ಎಲ್ಲ ಅವಧಿಯಲ್ಲಿ ತೆರೆದಿರಬೇಕು. ಜಿಲ್ಲೆಗಳಲ್ಲಿ ಯಾವುದಾದರೂ ಹಣ್ಣುಗಳು, ತರಕಾರಿಗಳ ಅತ್ಯಧಿಕ ಉತ್ಪನ್ನವಾಗುತ್ತಿದ್ದರೆ ಅಕ್ಕಪಕ್ಕದ ಜಿಲ್ಲೆಗಳಿಗೆ ನೀಡುವ ವ್ಯವಸ್ಥೆ ಮಾಡಬಹುದು ಎಂದರು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *