Connect with us

Dvgsuddi Kannada | online news portal | Kannada news online

ಚಿಕ್ಕಮಗಳೂರಲ್ಲಿ ಬಂಗಾರದ ಕಾಡು ಎಮ್ಮೆ ಪತ್ತೆ..

ಸ್ಪೆಷಲ್

ಚಿಕ್ಕಮಗಳೂರಲ್ಲಿ ಬಂಗಾರದ ಕಾಡು ಎಮ್ಮೆ ಪತ್ತೆ..

ಡಿವಿಜಿ ಸುದ್ದಿ, ಚಿಕ್ಕಮಗಳೂರು: ಅಪರೂಪದ ಕಾಟಿ ತಳಿಯ ಕಾಡೆಮ್ಮೆ ಸಂತತಿ ಜಿಲ್ಲೆಯ ಭದ್ರಾ ಹುಲಿ ಸಂರಕ್ಷಿತ ಅರಣ್ಯದ ಮುತ್ತೋಡಿ ವಲಯದಲ್ಲಿ ಪತ್ತೆಯಾಗಿದೆ.

ಕಾಡೆಮ್ಮೆಗಳು ಕಪ್ಪು ಬಣ್ಣದಿಂದ ಕೂಡಿರುತ್ತವೆ. ಆದರೆ ಕಾಟಿ ತಳಿಯ ಈ ಕಾಡೆಮ್ಮೆ ಬಂಗಾರದ ಬಣ್ಣದಿಂದ ಕಂಗೊಳಿಸುತ್ತಿದೆ. ಈ ಅಪರೂಪದ ಕಾಡೆಮ್ಮೆ ಬಣ್ಣ ಹಾಗೂ ಮೈಕಟ್ಟು ನೋಡುಗರಲ್ಲಿ ಅಚ್ಚರಿ ಮೂಡಿಸಿದೆ.

80-90ರ ದಶಕದಲ್ಲಿ ಈ ತಳಿಯ ಕಾಡೆಮ್ಮೆಗಳು ಕಾಫಿನಾಡ ಚಿಕ್ಕಮಗಳೂರಿನ ಅರಣ್ಯದಲ್ಲಿ ಇತ್ತು. ಈ  ತಳಿ ಸಂಪೂರ್ಣ ನಾಶವಾಗಿತ್ತು.ಆದರೆ, ಇದೀಗ ಮತ್ತೆ ಈ ಕಾಡೆಮ್ಮೆ ಪತ್ತೆಯಾಗಿರೋದು ಈ ತಳಿಗಳ ಬೆಳವಣಿಗೆಯಾಗಿದೆ ಎಂದೇ ಭಾವಿಸಲಾಗಿದೆ.

ಈ ಸಂತತಿ ಈಗ ಮತ್ತೆ ಹೆಚ್ಚಾಗಿರುವುದರಿಂದ ಪ್ರವಾಸಿಗರ ಕಣ್ಣಿಗೆ ಬಿದ್ದಿದೆ ಎಂದು ಹೇಳಲಾಗಿದೆ. ಚಿನ್ನದ ಲೇಪನದಂತೆ ಹೊಳೆಯುವ ಕಾಡೆಮ್ಮೆಯೊಂದು ಕಂಡಿದ್ದು. ಈ ಭಾಗದಲ್ಲಿ ಈ ರೀತಿಯ ಕಾಡೆಮ್ಮೆ ಕಾಣ ಸಿಗುವುದು ವಿಶೇಷ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಸ್ಪೆಷಲ್

To Top