Connect with us

Dvgsuddi Kannada | online news portal | Kannada news online

ಹಿರಿಯೂರು: ಚಲಿಸುತ್ತಿದ್ದ ಬಸ್ ಗೆ ಬೆಂಕಿ; ಐವರು ಮೃತಪಟ್ಟಿರುವ ಶಂಕೆ

ಜಿಲ್ಲಾ ಸುದ್ದಿ

ಹಿರಿಯೂರು: ಚಲಿಸುತ್ತಿದ್ದ ಬಸ್ ಗೆ ಬೆಂಕಿ; ಐವರು ಮೃತಪಟ್ಟಿರುವ ಶಂಕೆ

ಡಿವಿಜಿ ಸುದ್ದಿ, ಹಿರಿಯೂರು: ಚಲಿಸುತ್ತಿದ್ದ ಬಸ್‌ಗೆ ಬೆಂಕಿ ತಗುಲಿ ಹೊತ್ತಿ ಉರಿದ ಘಟನೆ ಹಿರಿಯೂರು ತಾಲ್ಲೂಕಿನ ಕೆ.ಆರ್.ಹಳ್ಳಿ ಬಳಿ ಇಂದು ಬೆಳಗಿನಜಾವ ನಡೆದಿದೆ.

ಈ ಘಟನೆಯಲ್ಲಿ ಇಬ್ಬರು ಮಕ್ಕಳು ಸೇರಿ ಐವರು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಕೆಎ 51- ಎಡಿ 7449 ಕುಕ್ಕೆ ಶ್ರೀ ಟ್ರಾವಲ್ಸ್ ಎಂಬ ಖಾಸಗಿ ಬಸ್ ಬಿಜಾಪುರದಿಂದ ಬೆಂಗಳೂರಿಗೆ ತೆರಳುತ್ತಿತ್ತು. ಪುಣೆ–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಗುವಾಗ ಈ ಘಟನೆ ನಡೆದಿದೆ. ಬಸ್ಸಿನಲ್ಲಿ 35ಕ್ಕೂ ಹೆಚ್ಚು ಪ್ರಯಾಣಿಕರು ಇದ್ದರು ಎಂದು ತಿಳಿದಿದೆ.

ಬಸ್‌ಗೆ ಬೆಂಕಿ ಅವರಿಸಿಕೊಳ್ಳುತ್ತಿದ್ದಂತೆ ಪ್ರಯಾಣಿಕರು ಹೊರಗೆ ಬರಲು ಪ್ರಯತ್ನಿಸಿದ್ದಾರೆ. ಹೀಗಾಗಿ  ಕೆಲವರಿಗೆ ಗಂಭೀರ ಗಾಯಗಳಾಗಿವೆ.

ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಲು ಪ್ರಯತ್ನಿಸಿದ್ದಾರೆ. ಬಸ್ ಸಂಪೂರ್ಣ ಸುಟ್ಟು ಕರಕಲಾಗಿದೆ. ಗಾಯಳುಗಳನ್ನು ಹಿರಿಯೂರು ಆಸ್ಪತ್ರೆ ದಾಖಲಿಸಲಾಗಿದೆ. ಮೃತಪಟ್ಟವರ ಪತ್ತೆ ಕಾರ್ಯ ನಡೆಯುತ್ತಿದೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಜಿಲ್ಲಾ ಸುದ್ದಿ

To Top