ಸಿದ್ದರಾಮಯ್ಯ ಬಿಜೆಪಿಗೆ ಬರುವುದಾದರೆ, ನನ್ನ ಸ್ಥಾನ ಬಿಟ್ಟು ಕೊಡಲು ಸಿದ್ಧ: ಶಾಸಕ ತಿಪ್ಪಾರೆಡ್ಡಿ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಡಿವಿಜಿ ಸುದ್ದಿ, ಚಿತ್ರದುರ್ಗ: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಬಿಜೆಪಿಗೆ ಬರುವುದಾದರೆ, ನನ್ನ ಸ್ಥಾನವನ್ನೇ ಬಿಟ್ಟುಕೊಡುತ್ತೇನೆ ಎಂದು ಚಿತ್ರದುರ್ಗದ ಬಿಜೆಪಿ ಶಾಸಕ ತಿಪ್ಪಾರೆಡ್ಡಿ ಹೇಳಿದ್ದಾರೆ.

ರಾಜಕೀಯದಲ್ಲಿ ಯಾರೂ ಶತ್ರುಗಳಲ್ಲ, ಯಾರೂ ಮಿತ್ರರಲ್ಲ. ಕಾಂಗ್ರೆಸ್‍ನಲ್ಲಿ ಸಿದ್ದರಾಮಯ್ಯ ಅವರನ್ನು ಹೊರಗಿಡುವ ಯತ್ನ ನಡೆಯುತ್ತಿದೆ. ಹೀಗಾಗಿ ಒಂದು ವೇಳೆ ಸಿದ್ದರಾಮಯ್ಯ ಬಿಜೆಪಿಗೆ ಬಂದರೆ ಅವರನ್ನು ಸಂತೋಷದಿಂದ ಸ್ವಾಗತಿಸುತ್ತೇನೆ.ಅವರು ಬಿಜೆಪಿ ಸೇರಿ ಚುನಾವಣೆಗೆ ಸ್ಪರ್ಧಿಸುವುದಾದರೆ ನನ್ನ ಸ್ಥಾನವನ್ನೇ ಬಿಟ್ಟು ಕೊಡುತ್ತೇನೆ ಎಂದಿದ್ಧಾರೆ.

siddaramaih 3

ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರು ವ ಸಂವಿಧಾನದ ಬಗ್ಗೆ ತುಂಬಾ ಚೆನ್ನಾಗಿ ಮಾತನಾಡುವವರು. ಅವರು ಪ್ರಧಾನಿ ಮೋದಿಯವರನ್ನು ಒದ್ದೋಡಿಸಿ ಎಂಬ ಹೇಳಿಕೆ ನೀಡಿದ್ದುಅಚ್ಚರಿ ಮೂಡಿಸಿದೆ. ರಮೇಶ್ ಕುಮಾರ್ ಅವರು ಪ್ರಧಾನಿ ಮೋದಿಯವರಿಗೆ ಮತ ಹಾಕದೇ ಇರಬಹು. ಆದರೆ ದೇಶದ ಜನ ಮತ ಹಾಕಿ ಮೋದಿ ಅವರನ್ನು ಪ್ರಧಾನಿಯಾಗಿ ಗೆಲ್ಲಿಸಿದ್ದಾರೆ.

ಕಾಂಗ್ರೆಸ್ ನಾಯಕರು ರಾಹುಲ್ ಗಾಂಧಿ ಹಾಗೂ ಸೋನಿಯಾ ಗಾಂಧಿ ಅವರನ್ನು ಮೆಚ್ಚಿಸಲು ಮನಸೋ ಇಚ್ಛೆ ಮಾತನಾಡುತ್ತಿದ್ದಾರೆ. ಬಾಡಿಗೆಗೆ ಬಂದ ಜನರಂತೆ ಮಾತಾಡುವುದು ಅವರ ಘನತೆಗೆ ತಕ್ಕುದಲ್ಲ ಎಂದು ತಿಪ್ಪಾರೆಡ್ಡಿ ವಾಗ್ದಾಳಿ ನಡೆಸಿದರು

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *