ಡಿವಿಜಿ ಸುದ್ದಿ, ಬೆಂಗಳೂರು: ಕೋವಿಡ್-19 ಕರ್ತವ್ಯಕ್ಕೆ ನಿಯೋಜಿಸಿರುವ ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗದಿದ್ದರೆ ಶಿಸ್ತುಕ್ರಮ ಜರುಗಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಕೋವಿಡ್ ನಿರ್ವಹಣೆಗೆ ನಿಯೋಜಿತವಾಗಿರುವ ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗದ ಕೆಲ ಪ್ರಕರಣಗಳು ಗಮನಕ್ಕೆ ಬಂದಿವೆ. ಇಂತಹ ಲೋಪವನ್ನು ಸಹಿಸಲು ಆಗವುದಿಲ್ಲ. ತಪ್ಪು ಮಾಡಿದವರ ವಿರುದ್ಧ ಈಗಾಗಲೇ ಶಿಸ್ತುಕ್ರಮ ಜರುಗಿಸಲಾಗುವುದು ಎಂದಿದ್ದಾರೆ.
ಕೋವಿಡ್ 19 ಜಾಗತಿಕ ಸಂಕಷ್ಟದ ಈ ಸಮಯದಲ್ಲಿ ಹೆಚ್ಚಿನ ಮಾನವ ಸಂಪನ್ಮೂಲದ ಅಗತ್ಯವಿದೆ. ಎಲ್ಲರೂ ತಮ್ಮ ಜವಾಬ್ದಾರಿ ನಿರ್ವಹಿಸುವ ಮೂಲಕ ಕೋವಿಡ್ ವಿರುದ್ಧ ಹೋರಾಟದಲ್ಲಿ ಮೇಲುಗೈ ಸಾಧಿಸೋಣ ಎಂದು ತಿಳಿಸಿದ್ದಾರೆ.
ಕೋವಿಡ್ 19 ನಿರ್ವಹಣೆಯ ಕರ್ತವ್ಯಕ್ಕೆ ನಿಯೋಜಿಸಿರುವ ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗದೆ ನಿರ್ಲಕ್ಷ್ಯ ತೋರಿಸಿರುವ ಕೆಲವು ಪ್ರಕರಣಗಳು ಗಮನಕ್ಕೆ ಬಂದಿವೆ. ಈ ಲೋಪವನ್ನು ಸಹಿಸಲಾಗದು. ಅಂತಹವರ ವಿರುದ್ಧ ಈಗಾಗಲೇ ಶಿಸ್ತು ಕ್ರಮ ಕೈಗೊಳ್ಳಲಾಗಿದೆ.1/2
— CM of Karnataka (@CMofKarnataka) July 2, 2020



