ಕೊರೊನಾ ವೈರಸ್ ನಿಯಂತ್ರಣಕ್ಕೆ ಸಿಎಂ  ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತಗೆದುಕೊಂಡ ತೀರ್ಮಾನ ಇಲ್ಲಿದೆ ನೋಡಿ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
2 Min Read

ಡಿವಿಜಿ ಸುದ್ದಿ, ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್ ನಿಯಂತ್ರಣ ಮಾಡುವ ನಿಟ್ಟಿದಲ್ಲಿ  ಕೈಗೊಂಡಿರುವ ಕ್ರಮಗಳ ಕುರಿತಂತೆ ಬೆಂಗಳೂರಿನಲ್ಲಿ ಉನ್ನತ ಮಟ್ಟದ ಸಭೆ ನಡೆಯಿತು. ಸಭೆಯಲ್ಲಿ ಕೆಲವೊಂದು ಮಹತ್ವದ ನಿರ್ಧಾರ ಕೈಗೊಳ್ಳಲಾಯಿತು.

ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪನವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಉಪಮುಖ್ಯಮಂತ್ರಿ ಅಶ್ವಥ್‍ನಾರಾಯಣ, ಸಚಿವರಾದ ಆರ್. ಅಶೋಕ್, ಸುರೇಶ್ ಕುಮಾರ್, ವಿ. ಸೋಮಣ್ಣ, ಬಸವರಾಜು ಬೊಮ್ಮಾಯಿ, ಸುಧಾಕರ್, ಬಿ ಶ್ರೀರಾಮುಲು, ಮುಖ್ಯ ಕಾರ್ಯದರ್ಶಿಗಳಾದ ಟಿ.ಎಂ. ವಿಜಯಭಾಸ್ಕರ್, ಹಾಗೂ ಸರ್ಕಾರದ ಹಿರಿಯ ಅಧಿಕಾರಿಗಳೊಂದಿಗೆ ಉಪಸ್ಥಿತರಿದ್ದರು. ಸಭೆಯಲ್ಲಿ ನಡೆದಿರುವ ಚರ್ಚೆಗಳು ಪ್ರಮುಖ ಅಂಶಗಳು ಹೀಗಿದೆ.

ಪಿ.ಪಿ.ಇ. ಕಿಟ್‍ಗಳ ಗುಣಮಟ್ಟ ಹಾಗೂ ಪಿಪಿಇ ಕಿಟ್‍ಗಳ ಕೊರತೆ ನಿವಾರಿಸಲು  ಕ್ರಮ

1 ಲಕ್ಷ ಪಿಪಿಇ ಕಿಟ್‍ಗಳ ಪೂರೈಕೆಗೆ ಕ್ರಮ. ಇನ್ನೂ 2 ಲಕ್ಷ ಪಿಪಿಇ ಕಿಟ್‍ಗಳ ಪೂರೈಕೆಗೆ ಕಾರ್ಯಾದೇಶ

ಎಲ್ಲ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಜಿಲ್ಲೆಗಳಿಗೆ ಭೇಟಿ ನೀಡಿ, ಅಲ್ಲಿ ಕೈಗೊಂಡಿರುವ ನಿಯಂತ್ರಣ ಹಾಗೂ ಮುನ್ನೆಚ್ಚರಿಕೆ ಕ್ರಮವನ್ನು ಪರಿಶೀಲಿಸಲಿಸುವುದು

ಓಲಾ ಉಬರ್ ಕಂಪೆನಿಗಳ ನೆರವಿನೊಂದಿಗೆ ತುರ್ತು ಸಂದರ್ಭದಲ್ಲಿ ವಿವಿಧ ಕಾಯಿಲೆಯಿಂದ ಬಳಲುತ್ತಿರುವ ರೋಗಿಗಳ ಸೇವೆಗೆ ವಾಹನ ಒದಗಿಸುವ ಬಗ್ಗೆ ಕ್ರಮ ವಹಿಸಲು ಸೂಚಿಸಲಾಗಿದೆ.

15 ಲಕ್ಷ ಕಟ್ಟಡ ಕಾರ್ಮಿಕರ ಖಾತೆಗೆ ಈಗಾಗಲೇ 1 ಸಾವಿರ ರೂ. ಜಮಾ ಮಾಡಲಾಗಿದೆ. ಅವರಿಗೆ ಹೆಚ್ಚುವರಿಯಾಗಿ ಇನ್ನೂ 1 ಸಾವಿರ ರೂ. ಜಮಾ ಮಾಡಲು ಕಾರ್ಮಿಕ ಇಲಾಖೆಗೆ ಸೂಚನೆ

ಉಚಿತ ಆಹಾರ ಕ್ರಮ ಬದ್ಧವಾಗಿ ಆಗುತ್ತಿಲ್ಲ. ಇದನ್ನು ವ್ಯವಸ್ಥಿತವಾಗಿ ನಿರ್ವಹಿಸುವ ಬಗ್ಗೆ ಬೆಂಗಳೂರಿನ ಸಚಿವರು, ಶಾಸಕರೊಂದಿಗೆ ಹಾಗೂ ಅಧಿಕಾರಿಗಳ ಜೊತೆ ಚರ್ಚಿಸಿ ಕ್ರಮ

ರಾಜ್ಯದಲ್ಲಿ ವರದಿಯಾದ ಕೋವಿಡ್ 19 ಪ್ರಕರಣಗಳಲ್ಲಿ ಅರ್ಧದಷ್ಟು ಬೆಂಗಳೂರಿನಲ್ಲಿ ಇವೆ. ಈ ನಿಟ್ಟಿನಲ್ಲಿ ಬೆಂಗಳೂರಿನಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವ ಬಗ್ಗೆ ಬೆಂಗಳೂರು ನಗರದ ಸಚಿವರೊಂದಿಗೆ ಸಭೆ ನಡೆಸಲಾಯಿತು.

ಶನಿವಾರ ಬೆಳಿಗ್ಗೆ 11 ಗಂಟೆಗೆ ಬೆಂಗಳೂರಿನ ಸಚಿವರು ಹಾಗೂ ಶಾಸಕರೊಂದಿಗೆ ಸಭೆ ಕರೆಯಲು ತೀರ್ಮಾನ

ಬಡವರು, ಕಾರ್ಮಿಕರಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ಬಿಡುಗಡೆಯಾಗುವ ಪಡಿತರ ವಿತರಣೆ

ಸಾಮಾಜಿಕ ಭದ್ರತಾ ಯೋಜನೆ ಅಡಿ ಎರಡು ತಿಂಗಳ ಪಿಂಚಣಿಗಳನ್ನು ಮುಂಗಡವಾಗಿ ವಿತರಿಸಲಾಗುತ್ತಿದೆ

ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಹೆಚ್ಚಿನ ನೆರವು ಪಡೆಯಲು ನಗರದ ದಾನಿಗಳ ಮನವೊಲಿಸಲು ಸೂಚನೆ ನೀಡಲಾಯಿತು

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *