ಡಿವಿಜಿ ಸುದ್ದಿ, ರಾಮನಗರ: ಇನ್ನು ಮೂರು ವರ್ಷ ಯಡಿಯೂರಪ್ಪ ಅವರೇ ರಾಜ್ಯದ ಮುಖ್ಯಮಂತ್ರಿಯಾಗಿ ಇರಲಿದ್ದಾರೆ. ನಾಯಕತ್ವ ಬದಲಾವಣೆ ಪ್ರಶ್ನೆ ಇಲ್ಲ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದರು.
ನಮ್ಮ ಪಕ್ಷದಲ್ಲಿ ಪ್ರತಿ ಶಾಸಕ, ಕಾರ್ಯಕರ್ತರಗೆ ಬೇಕಾದ್ದನ್ನು ಕೇಳುವ ಹಕ್ಕಿದೆ. ಹೈಕಮಾಂಡ್ ಎಲ್ಲವನ್ನು ನಿರ್ಧರಿಸಲಿದೆ. ಕಾಂಗ್ರೆಸ್ ಪಕ್ಷದಂತೆ ನಮ್ಮ ಪಕ್ಷ ದುರ್ಬಲ ಹೈಕಮಾಂಡ್ ಹೊಂದಿಲ್ಲ ಎಂದರು.
ದೇವೇಗೌಡರನ್ನು ಪ್ರಧಾನಿ ಹುದ್ದೆಯಿಂದ ಕೆಳಗಿಳಿಸಿದ್ದೇ ಕಾಂಗ್ರೆಸ್. ಈಗ ಜೆಡಿಎಸ್ನವರಿಗೆ ತಮ್ಮ ತಪ್ಪಿನ ಅರಿವಾಗಿದೆ. ಹಿಂದೊಮ್ಮೆ ನಾವು ಜೆಡಿಎಸ್ ಜೊತೆಗೂಡಿ ಆಡಳಿತ ನಡೆಸಿದ್ದೇವೆ. ಮತ್ತೆ ಸಹಕಾರ ನೀಡುವುದಾದರೆ ಸ್ವಾಗತಿಸುತ್ತೇವೆ ಎಂದರು.
ರಾಜ್ಯಸಭೆ, ಪರಿಷತ್ ಚುನಾವಣೆ ಸಂಬಂಧ ಇನ್ನೊಂದು ವಾರದಲ್ಲಿ ಸಭೆ ನಡೆಯಲಿದೆ. ಸಭೆಯ ನಂತರ ಅಭ್ಯರ್ಥಿಗಳ ತೀರ್ಮಾನ ಆಗಲಿದೆ. ಇದುವರೆಗೆ ಪಕ್ಷ ಯಾರನ್ನೂ ಅಂತಿಮಗೊಳಿಸಿಲ್ಲ ಎಂದು ತಿಳಿಸಿದರು.



