Connect with us

Dvgsuddi Kannada | online news portal | Kannada news online

ರಾಜ್ಯದಲ್ಲಿ ಸಾವಿರಾರು ಕೋಟಿ ಬಂಡವಾಳ ಹೂಡಿಕೆ ವಿಶ್ವಾಸ : ಸಿಎಂ ಯಡಿಯೂರಪ್ಪ

ಪ್ರಮುಖ ಸುದ್ದಿ

ರಾಜ್ಯದಲ್ಲಿ ಸಾವಿರಾರು ಕೋಟಿ ಬಂಡವಾಳ ಹೂಡಿಕೆ ವಿಶ್ವಾಸ : ಸಿಎಂ ಯಡಿಯೂರಪ್ಪ

 ಡಿವಿಜಿ ಸುದ್ದಿ, ಬೆಂಗಳೂರು:  ಇತ್ತೀಚೆಗೆ ದಾವೋಸ್‌ನಲ್ಲಿ ನಡೆದ ವಿಶ್ವ ಆರ್ಥಿಕ ವೇದಿಕೆಯಲ್ಲಿ ಭಾಗಿಯಾಗಿದ್ದ ಮುಖ್ಯಮಂತ್ರಿ ಯಡಿಯೂರಪ್ಪ , ಮುಂಬರುವ ದಿನಗಳಲ್ಲಿ ರಾಜ್ಯಕ್ಕೆ ಸಾವಿರಾರು ಕೋಟಿ ಬಂಡವಾಳ ಹರಿದು  ಬರಲಿದೆ ಎಂದು ಹೇಳಿದರು.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,  ರಾಜ್ಯದಲ್ಲಿ ಉದ್ಯಮಗಳ ಸ್ಥಾಪನೆಯ ಜೊತೆಗೆ  ಅಧಿಕ ಪ್ರಮಾಣದಲ್ಲಿ ಉದ್ಯೋಗ ಸೃಷ್ಟಿಸಲು ಆದ್ಯತೆ ನೀಡಲಾಗುವುದು ಎಂದರು.

ಈಗಲೇ ರಾಜ್ಯಕ್ಕೆ ಎಷ್ಟು ಬಂಡವಾಳ ಬರಲಿದೆ ಎಂದು ಹೇಳಲು ಆಗುವುದಿಲ್ಲ. ಮಂಬರುವ ವಿಶ್ವ ಹೂಡಿಕೆದಾರರ ಸಮ್ಮೇಳನದಲ್ಲಿ ಸಂಪೂರ್ಣ ಮಾಹಿತಿ ಸಿಗಲಿದೆ. ಖ್ಯಾತ ಉದ್ಯಮಿಗಳಾದ ಲಕ್ಷ್ಮೀ ಮಿತ್ತಲ್,  ವೋಲ್ವೊ, 2000 ವ್ಯಾಟ್‌, ಜನರಲ್‌ ಎಲೆಕ್ಟ್ರಿಕಲ್ಸ್‌, ಡಾಸೋ, ಸಿಸ್ಟಮ್‌, ಲಾಕ್ಹೀಡ್‌ ಮಾರ್ಟೀನ್‌, ಲೂಲು ಗ್ರೂಪ್‌, ದಾಲ್ಮಿಯಾ, ಅರವಿಂದ ಕಿರ್ಲೋಸ್ಕರ್‌, ನೋವಾ ನಾಸ್ಡಿಕ್‌, ವೋಲ್ವೊ ಸೇರಿ 40 ಕ್ಕೂ ಹೆಚ್ಚು ಉದ್ಯಮಿಗಳು ಭೇಟಿಯಾಗಿದ್ದಾರೆ. ಇವರು  ರಾಜ್ಯದಲ್ಲಿ ಹೂಡಲು ಒಲವು ತೋರಿಸಿದ್ದಾರೆ ಎಂದರು.

ಈ ಸಮ್ಮೇಳನಕ್ಕೆ ಹೋಗುವ ಆಸಕ್ತಿ ಇರಲಿಲ್ಲ. ಆದರೆ, ಭಾಗವಹಿಸಿದ್ದು ಸರಿಯಾದ ತೀರ್ಮಾನ ಅನ್ನಿಸುತ್ತಿದೆ. ಹೋಗದಿದ್ದರೆ ರಾಜ್ಯಕ್ಕೆ ವಿದೇಶಿ ಬಂಡವಾಳ ಬರುತ್ತಿರಲಿಲ್ಲ. ಹೀಗಾಗಿ ದಾವೋಸ್‌ ಪ್ರಯಣ ಯಶಸ್ವಿಯಾಗಿದ್ದು, ಇದರಿಂದ ಮುಂದಿನ ದಿನಮಾನದಲ್ಲಿ ನಿರುದ್ಯೋಗ ಯುವಕರಿಗೆ ಮತ್ತು ನಮ್ಮ ರೈತರಿಗೆ ಅನುಕೂಲವಾಗಲಿದೆ ಎಂದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top