ಭಿನ್ನಮತಿಯರ ಸಭೆ; ನಾನು ಕೊರೊನಾ ಸಮಸ್ಯೆ ನಿವಾರಣೆಯಲ್ಲಿ ತೊಡಗಿಸಿಕೊಂಡಿದ್ದೇನೆ: ಸಿಎಂ ಯಡಿಯೂರಪ್ಪ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಡಿವಿಜಿ ಸುದ್ದಿ, ಬೆಂಗಳೂರು: ಬಿಜೆಪಿ ಅತೃಪ್ತರ ಸಭೆ ಮತ್ತು ನಾಯಕತ್ವವನ್ನು ಪ್ರಶ್ನಿಸಿದ ಬಗ್ಗೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪಪ್ಪ  ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದು, ನಾನು ಕೊರೊನಾ ಸಂಕಷ್ಟ ನಿವಾರಣೆಯಲ್ಲಿ ತೊಡಗಿದ್ದೇನೆ. ಬೇರೆ ವಿಷಯ ಮಾತನಾಡುವುದಿಲ್ಲ ಎಂದು ಹೇಳಿದರು.

ನರೇಂದ್ರಮೋದಿ ಪ್ರಧಾನಿಯಾಗಿ ಒಂದು ವರ್ಷ ತುಂಬಿದ ಹಿನ್ನೆಲೆಯಲ್ಲಿ ನಡೆಸಿದ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಕೊರೊನಾ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ತೊಡಗಿದ್ದೇನೆ. ಅದನ್ನು ಬಿಟ್ಟು ಬೇರೆ ಏನನ್ನೂ ಮಾತನಾಡುವುದಿಲ್ಲ ಎಂದರು.

ಕೇಂದ್ರ ಸರ್ಕಾರ ರಾಜ್ಯಕ್ಕೆ ನೀಡಬೇಕಾಗಿರುವ ಹಣವನ್ನು ಬಿಡುಗಡೆ ಮಾಡದೇ ನಿರ್ಲಕ್ಷ್ಯ ತೋರಿಸಿದೆಯಲ್ಲ ಎಂಬ ಪ್ರಶನ್ಸೆಗೆ ಹಲವು ಸಂದರ್ಭಗಳಲ್ಲಿ ರಾಜ್ಯಕ್ಕೆ ಅನುದಾನ ನೀಡಿದೆ. ಮುಂದಿನ ದಿನಗಳಲ್ಲಿ ಜಾಸ್ತಿ ಹಣ ಬಿಡುಗಡೆ ಮಾಡುತ್ತಾರೆ ನಂಬಿಕೆ ಇದೆ ಎಂದು ತಿಳಿಸಿದರು.

ರಾಜ್ಯದಲ್ಲಿ ಕೊರೊನಾ ಪೀಡಿತರಿಗೆ ಯಾವುದೇ ಆಸ್ಪತ್ರೆಗಳು ಚಿಕಿತ್ಸೆ ನಿರಾಕರಿಸುವಂತಿಲ್ಲ. ಎಂತಹುದೇ ತುರ್ತು ಸಂದರ್ಭ ಬಂದರೂ ಚಿಕಿತ್ಸೆ ನೀಡಲೇಬೇಕು. ಈ ವಿಷಯದ ಬಗ್ಗೆ ದೂರುಗಳು ಬಂದಿವೆ. ಕೊರೊನಾ ನಿರ್ವಹಣೆಗೆ ಸಂಬಂಧಿಸಿದಂತೆ ವೈದ್ಯಕೀಯ ಉಪಕರಣಗಳ ಕೊರತೆ ಇಲ್ಲ. ರಾಜ್ಯದಲ್ಲಿ ಪರಿಸ್ಥಿತಿ ನಿಭಾಯಿಸಲು ಅಗತ್ಯವಿರುವಷ್ಟು ಪಿಪಿಇ ಕಿಟ್‌ಗಳು ಸೇರಿದಂತೆ ಎಲ್ಲ ಬಗೆಯ ಉಪಕರಣಗಳೂ ಇವೆ ಎಂದರು.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *