Connect with us

Dvgsuddi Kannada | online news portal | Kannada news online

ನೂತನ ಜಿಲ್ಲಾ ಉಸ್ತುವಾರಿ ಸಚಿವರ ನೇಮಕ; ಯಾರಿಗೆ ಯಾವ ಜಿಲ್ಲೆ..? ಇಲ್ಲಿದೆ ನೋಡಿ ಪಟ್ಟಿ

ಪ್ರಮುಖ ಸುದ್ದಿ

ನೂತನ ಜಿಲ್ಲಾ ಉಸ್ತುವಾರಿ ಸಚಿವರ ನೇಮಕ; ಯಾರಿಗೆ ಯಾವ ಜಿಲ್ಲೆ..? ಇಲ್ಲಿದೆ ನೋಡಿ ಪಟ್ಟಿ

ಡಿವಿಜಿ ಸುದ್ದಿ , ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.‌ಯಡಿಯೂರಪ್ಪ ಅವರು ಹೊಸದಾಗಿ ಜಿಲ್ಲೆಯ ಉಸ್ತುವಾರಿ ಸಚಿವರ ನೇಮಕ ಮಾಡಿದ್ದಾರೆ. ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಸೇರಿದಂತೆ ಮೂವರು ಸಚಿವರಿಗೆ ಕೋಕ್ ನೀಡಲಾಗಿದೆ.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬೆಂಗಳೂರು ನಗರ ಜಿಲ್ಲಾ ಉಸ್ತವಾರಿಯನ್ನು ವಹಿಸಿಕೊಂಡಿದ್ದಾರೆ. ರಮೇಶ್ ಜಾರಕಿಹೊಳಿ, ಗೋಪಾಲಯ್ಯ, ಶ್ರೀಮಂತ ಪಾಟೀಲ್ ಅವರಿಗೆ ಯಾವುದೇ ಜಿಲ್ಲಾ ಉಸ್ತುವಾರಿ ನೀಡಿಲ್ಲ. ಸಚಿವ ಜಗದೀಶ್ ಶೆಟ್ಟರ್ ಅವರಿಗೆ ಬೆಳಗಾವಿ ಜಿಲ್ಲೆಯ ಜೊತೆಗೆ ಹೆಚ್ಚುವರಿಯಾಗಿ ಧಾರವಾಡ ಜಿಲ್ಲೆಯ ಉಸ್ತುವಾರಿ ನೀಡಲಾಗಿದೆ.

ಬಸವರಾಜ ಬೊಮ್ಮಾಯಿ, ಜೆ.ಸಿ. ಮಾಧುಸ್ವಾಮಿ, ಪ್ರಭು ಚವ್ಹಾಣ ಅವರಿಗೆ ಹೆಚ್ಚುವರಿ ಜಿಲ್ಲೆಗಳನ್ನು ನೀಡಿಲಾಗಿದೆ.

ಯಾರಿಗೆ ಯಾವ ಜಿಲ್ಲೆ?
ಬಿ.ಎಸ್.ಯಡಿಯೂರಪ್ಪ- ಬೆಂಗಳೂರು ನಗರ ಜಿಲ್ಲೆ
ಸಿ.ಎಸ್.ಅಶ್ವಥ್ ನಾರಾಯಣ- ರಾಮನಗರ
ಬಿ.ಸಿ. ಪಾಟೀಲ – ಕೊಪ್ಪಳ
ಲಕ್ಷ್ಣಣ ಸವದಿ- ರಾಯಚೂರಗೋವಿಂದ ಕಾರಜೋಳ- ಬಾಗಲಕೋಟೆ
ಕೆ.ಎಸ್.ಈಶ್ವರಪ್ಪ- ಶಿವಮೊಗ್ಗ
ಆರ್.ಅಶೋಕ್- ಬೆಂಗಳೂರು ಗ್ರಾಮಾಂತರ
ಜಗದೀಶ್ ಶೆಟ್ಟರ್- ಬೆಳಗಾವಿ, ಧಾರವಾಡ (ಹೆಚ್ಚುವರಿ)
ಬಿ.ಶ್ರೀರಾಮುಲು- ಚಿತ್ರದುರ್ಗ
ಕೆ.ಸುಧಾಕರ್- ಚಿಕ್ಕಬಳ್ಳಾಪುರ
ಎಸ್.ಸುರೇಶ್ ಕುಮಾರ್- ಚಾಮರಾಜನಗರ
ವಿ.ಸೋಮಣ್ಣ- ಕೊಡಗು
ಸಿ.ಟಿ.ರವಿ- ಚಿಕ್ಕಮಗಳೂರು
ಬಸವರಾಜ ಬೊಮ್ಮಾಯಿ- ಹಾವೇರಿ, ಉಡುಪಿ (ಹೆಚ್ಚುವರಿ)
ಕೋಟಾ ಶ್ರೀನಿವಾಸ ಪೂಜಾರಿ- ದಕ್ಷಿಣ ಕನ್ನಡ
ಜೆ.ಸಿ. ಮಾಧುಸ್ವಾಮಿ- ತುಮಕೂರು, ಹಾಸನ (ಹೆಚ್ಚುವರಿ)
ಸಿ.ಸಿ. ಪಾಟೀಲ- ಗದಗ
ಎಚ್.ನಾಗೇಶ್- ಕೋಲಾರ
ಪ್ರಭು ಚವ್ಹಾಣ- ಬೀದರ್, ಯಾದಗಿರಿ (ಹೆಚ್ಚುವರಿ)
ಶಶಿಕಲಾ ಜೊಲ್ಲೆ- ವಿಜಯಪುರ
ಶಿವರಾಮ್ ಹೆಬ್ಬಾರ್- ಉತ್ತರ ಕನ್ನಡ
ಎಸ್.ಟಿ.ಸೋಮಶೇಖರ್- ಮೈಸೂರು
ಕೆ.ಸಿ.ನಾರಾಯಣಗೌಡ- ಮಂಡ್ಯ
ಆನಂದಸಿಂಗ್- ಬಳ್ಳಾರಿ
ಬೈರತಿ ಬಸವರಾಜ- ದಾವಣಗೆರೆ

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top