Connect with us

Dvgsuddi Kannada | online news portal | Kannada news online

ಹರಿದಾಡಿದ ಅಶೋಕ ಗಸ್ತಿ ನಿಧನದ ಸುಳ್ಳು ಸುದ್ದಿ

ಪ್ರಮುಖ ಸುದ್ದಿ

ಹರಿದಾಡಿದ ಅಶೋಕ ಗಸ್ತಿ ನಿಧನದ ಸುಳ್ಳು ಸುದ್ದಿ

ಡಿವಿಜಿ ಸುದ್ದಿ, ಬೆಂಗಳೂರು: ಕೊರೊನಾದಿಂದ  ಬೆಂಗಳೂರಿನ ಮಣಿಪಾಲ್‌ ಐಸಿಯುನಲ್ಲಿ  ಚಿಕಿತ್ಸೆ ಪಡೆಯುತ್ತಿರುವ ರಾಜ್ಯಸಭೆ ಸದಸ್ಯ ಅಶೋಕ ಗಸ್ತಿ ಅವರು ನಿಧನರಾಗಿದ್ದಾರೆ ಎನ್ನುವ ಸುಳ್ಳು ಸುದ್ದಿ ಸಾಮಾಜಿಕ ಜಾಲತಾಣ ಹಾಗೂ ವಾಹಿನಿಗಳಲ್ಲಿ ಪ್ರಸಾರವಾಗಿ ಸಾಕಷ್ಟು ಗೊಂದಲ ಮೂಡಿಸಿತ್ತು.

ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ ಸುಳ್ಳುಸುದ್ದಿ ಗಮನಿಸಿ, ಕೇಂದ್ರ ಗೃಹ ಸಚಿವ ಅಮಿತ್‌ ಷಾ ಸೇರಿದಂತೆ ಬಿಜೆಪಿ ರಾಜ್ಯ  ನಾಯಕರು ತಮ್ಮ ಟ್ವಿಟರ್ ಖಾತೆಗಳಲ್ಲಿ ಸಂತಾಪ ಸೂಚಿಸಿದ್ದರು. ಗುರುವಾರ ಸಂಜೆ ಮಣಿಪಾಲ್‌ ಆಸ್ಪತ್ರೆಯಿಂದ ಹೊರಬಿದ್ದ ಪ್ರಕಟಣೆಯ ಬಳಿಕ ತಮ್ಮ ಸಂದೇಶಗಳನ್ನು ಬದಲಿಸಿಕೊಂಡು ಗಸ್ತಿ ಅವರಿಗೆ ಮರುಜನ್ಮ ದೊರಕಲಿ, ಬೇಗನೆ ಗುಣಮುಖರಾಗಿ ಹೊರಬರಲಿ ಎಂದು ಶುಭ ಹಾರೈಸುವ ಸಂದೇಶಗಳು ಸಾಮಾಜಿಕ ಜಾಲತಾಣದಲ್ಲಿ ಈಗ ಹರಿದಾಡುತ್ತಿವೆ.

 ಇತ್ತೀಚೆಗಷ್ಟೇ ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದ ಅಶೋಕ್ ಗಸ್ತಿ ಕೊರೊನಾಗೆ ಚಿಕಿತ್ಸೆ ಪಡೆಯುತ್ತಿದ್ದಾರೆ.ರಾಯಚೂರು ಜಿಲ್ಲೆಯ ಲಿಂಗಸೂರಿನವರಾದ ಗಸ್ತಿಯವರಿಗೆ ಕಳೆದ ಎರಡು ವಾರಗಳಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಕೊರೋನಾಗಾಗಿ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ.

ಭಾರತೀಯ ಜನತಾ ಪಕ್ಷ ಮತ್ತು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸಕ್ರಿಯ ಸದಸ್ಯರಾಗಿದ್ದ ಅಶೋಕ್ ಗಸ್ತಿ ಸವಿತಾ ಸಮಾಜಕ್ಕೆ ಸೇರಿದವರು. ಅವರು ಬಳ್ಳಾರಿ ಜಿಲ್ಲೆ, ಕೊಪ್ಪಳ ಜಿಲ್ಲೆ ಮತ್ತು ರಾಯಚೂರು ಜಿಲ್ಲೆಯ ಪಕ್ಷದ ಉಸ್ತುವಾರಿ ವಹಿಸಿದ್ದರು.2020 ರಲ್ಲಿ ರಾಜ್ಯಸಭೆಗೆ ನಾಮನಿರ್ದೇಶನಗೊಳ್ಳುವವರೆಗೆ ಎಂದಿಗೂ ಬೆಳಕಿಗೆ ಬಂದಿರಲಿಲ್ಲ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top