Connect with us

Dvgsuddi Kannada | online news portal | Kannada news online

ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳ; ಮಹಾರಾಷ್ಟ್ರಕ್ಕೆ  ಬಸ್ ಸಂಚಾರ ರದ್ದು

ಪ್ರಮುಖ ಸುದ್ದಿ

ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳ; ಮಹಾರಾಷ್ಟ್ರಕ್ಕೆ  ಬಸ್ ಸಂಚಾರ ರದ್ದು

ಡಿವಿಜಿ ಸುದ್ದಿ, ಬಾಗಲಕೋಟೆ: ಇಡೀ ದೇಶದಲ್ಲಿ ಮಹಾರಾಷ್ಟ್ರ ರಾಜ್ಯದಲ್ಲಿ  ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ಹೆಚ್ಚಿರುವ ಹಿನ್ನೆಲೆಯಲ್ಲಿ ಬಾಗಲಕೋಟೆ ಜಿಲ್ಲೆಯಿಂದ ಸಂಚರಿಸುವ  ಎಲ್ಲಾ ಬಸ್ ಸೇವೆಯನ್ನು ರದ್ದುಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ  ತಿಳಿಸಿದ್ದಾರೆ.

ಮಹಾರಾಷ್ಟ್ರದಲ್ಲಿ ಹೊರ ದೇಶದಿಂದ ಬರುವವರ ಸಂಖ್ಯೆ ಹೆಚ್ಚು. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯಿಂದ ಮುಂಬೈ ಹಾಗೂ ಪುಣೆಗೆ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದೆ.

ಬಾದಾಮಿ, ಬಾಗಲಕೋಟೆ, ಇಳಕಲ್, ಜಮಖಂಡಿ, ಮುಧೋಳ ಘಟಕಗಳಿಂದ ಪ್ರತಿನಿತ್ಯ ಮುಂಬೈ ಹಾಗೂ ಪುಣೆಗೆ ತೆರಳುವ ಐದು ಐಷಾರಾಮಿ  ಬಸ್ ಗಳ  ಸಂಚಾರವನ್ನು ಅನಿರ್ದಿಷ್ಟ ಅವಧಿಗೆ ಸ್ಥಗಿತಗೊಳಿಸಲಾಗಿದೆ. ಮುಂದಿನ ಪರಿಸ್ಥಿತಿ ನೋಡಿಕೊಂಡು  ಸೇವೆ ಆರಂಭಿಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top