Connect with us

Dvgsuddi Kannada | online news portal | Kannada news online

ಸಚಿವ ಗೋವಿಂದ್ ಕಾರಜೋಳಗೆ ಶ್ರದ್ಧಾಂಜಲಿ ಸಲ್ಲಿಸಿದ ಕಲಬುರುಗಿ ಜನ

ಪ್ರಮುಖ ಸುದ್ದಿ

ಸಚಿವ ಗೋವಿಂದ್ ಕಾರಜೋಳಗೆ ಶ್ರದ್ಧಾಂಜಲಿ ಸಲ್ಲಿಸಿದ ಕಲಬುರುಗಿ ಜನ

ಡಿವಿಜಿಸುದ್ದಿ, ಬೆಂಗಳೂರು:   ಕೊರೊನಾ ವೈರಸ್‍ ತಗುಲಿ ದೇಶದಲ್ಲಿ ಮೊದಲು ಬಲಿ ಪಡೆದ ಕಲಬುರಗಿ ಜಿಲ್ಲೆ ಡೇಂಜರ್ ಝೂನ್‍ನಲ್ಲಿದೆ. ಇಂತಹ ಸಂದರ್ಭದಲ್ಲಿ  ಕಲಬುರಗಿ ಜನರ ಆತಂಕ ದೂರ ಮಾಡಬೇಕಿದ್ದ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಕಲಬುರಗಿಗೆ ಕಡೆ ತಿರುಗಿ ನೋಡಿಲ್ಲ. ಇದರಿಂದ  ಆಕ್ರೋಶಕೊಂಡ ಜನರು ಸಾಮಾಜಿಕ ಜಾಲತಾಣಗಳಲ್ಲಿ ಗೋವಿಂದ್ ಕಾರಜೋಳ ಅವರಿಗೆ  ಭಾವಪೂರ್ಣ ಶ್ರದ್ಧಾಂಜಲಿ ಎಂದು ಪೋಸ್ಟ್ ಮಾಡಿದ್ದಾರೆ.

ಕೊರೊನಾ ಭೀತಿ  ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇದಕ್ಕೆ ಮೊದಲ ಬಲಿ ರಾಜ್ಯದಲ್ಲೇ ಆಗಿದೆ. ಮೃತಪಟ್ಟ ಕೊರೊನಾ ಪೀಡಿತ ವ್ಯಕ್ತಿ ಕಲಬುರಗಿಯವರಾಗಿದ್ದು, ಇಡೀ ಜಿಲ್ಲೆ ಆತಂಕಗೊಂಡಿದ್ದಾರೆ. ಈ ಬಗ್ಗೆ ಜನರಿಗೆ ಧೈರ್ಯ ತುಂಬಾಬೇಕಿದ್ದ ಸಚಿವರು ಕಾಣೆಯಾಗಿದ್ದಾರೆ ಎಂದು ಜನ ಸಾಮಾಜಿಕ ಜಾಲತಾಣಗಳಲ್ಲಿಆಕ್ರೋಶ ವ್ಯ್ಕತವಾಗಿದೆ.

ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳಗೆ ‘ಭಾವಪೂರ್ಣ ಶ್ರದ್ಧಾಂಜಲಿ’, ‘ಗೋವಿಂದ ಕಾರಜೋಳ ಗೋವಿಂದ ನಾಮ ಹಾಡುತ್ತಿದ್ದಾರೆ’, ‘ಗೋವಿಂದ ಕಾರಜೋಳ ಎಲ್ಲಿ ಅಡಗಿ ಕುಳಿತಿದ್ದಾರೆ ನೋಡ್ರಿ ಸ್ವಾಮಿ’, ‘ಇಂತಹವರು ನಾಯಕರು ನಮಗೆ ಬೇಕಾ’ ಎಂದು ಜನರು ಬರದು ಪೋಸ್ಟ್ ಮಾಡುವ ಮೂಲಕ ತಮ್ಮ ಆಕ್ರೋಶವನ್ನು ಹೊರ ಹಾಕುತ್ತಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top