Connect with us

Dvgsuddi Kannada | online news portal | Kannada news online

ಡೆಡ್ಲಿ ಕೊರೊನಾಗೆ ರಾಜ್ಯದಲ್ಲಿ 11ನೇ ಬಲಿ

ಪ್ರಮುಖ ಸುದ್ದಿ

ಡೆಡ್ಲಿ ಕೊರೊನಾಗೆ ರಾಜ್ಯದಲ್ಲಿ 11ನೇ ಬಲಿ

 ಡಿವಿಜಿ ಸುದ್ದಿ, ಚಿಕ್ಕಬಳ್ಳಾಪುರ: ಡೆಡ್ಲಿ ಕೊರೊನಾ ವೈರಸ್‍ಗೆ ಚಿಕ್ಕಬಳ್ಳಾಪುರ ನಗರದ ನಿವಾಸಿ 65 ವರ್ಷದ ವೃದ್ಧ ಬಲಿಯಾಗಿದ್ದು, ಈ ಮೂಲಕ ರಾಜ್ಯದಲ್ಲಿ ಕೊರೊನಾಗೆ ಸಾವನ್ನಪ್ಪಿದವರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ.

ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ ಎರಡನೇ ಪ್ರಕರಣವಾಗಿದೆ. ಈ ಮೊದಲು ಗೌರಿಬಿದನೂರಿನ 70 ವರ್ಷದ ವೃದ್ಧೆ ಕೊರೊನಾ ವೈರಸ್‍ನಿಂದ ಮೃತಪಟ್ಟಿದರಿ. ಇದೀಗ ಚಿಕ್ಕಬಳ್ಳಾಪುರ ನಗರದ 65 ವರ್ಷದ ವೃದ್ಧ ಮೃತಪಟ್ಟಿದ್ದಾನೆ.  ವೃದ್ಧ ಅಸ್ತಮಾ, ಬಿಪಿ, ಸಕ್ಕರೆ ಖಾಯಿಲೆಯಿಂದ ಬಳಲುತ್ತಿದ್ದರು.

ಏಪ್ರಿಲ್ 08ರಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಂಗಳವಾರ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿತ್ತು.ಇಂದು ಸೋಂಕಿತ ವೃದ್ಧ ಮೃತಪಟ್ಟಿದ್ದಾನೆ.

ಈತ ಯಾವುದೇ ದೇಶಕ್ಕೆ ಹೋಗಿ ಬಂದಿಲ್ಲ. ಕೊರೊನಾ ಸೋಂಕಿತ ಪ್ರದೇಶಗಳಿಗೆ ಹೋಗಿ ಬಂದ  ಹಿಸ್ಟರಿ ಕೂಡ ಇಲ್ಲ. ಆದರೂ ಕೊರೊನಾ ಹೇಗೆ ಬಂದಿದೆ . ಇದು ವೈದ್ಯರಿಗೆ ಯಕ್ಷ ಪ್ರಶ್ನೆಯಾಗಿದ್ದು, ವೈರಸ್ ಮೂಲ ಪತ್ತೆ ಹಚ್ಚಲು ಆರೋಗ್ಯ ಇಲಾಖೆ ಅಧಿಕಾರಿಗಳು ನಿರತರಾಗಿದ್ದಾರೆ.

ಸದ್ಯ ಮೃತನ ಮನೆಯ ಎಲ್ಲಾ ಸದಸ್ಯರನ್ನು ಜಿಲ್ಲಾಸ್ಪತ್ರೆಯಲ್ಲಿ ಕ್ವಾರಂಟೈನ್ ಮಾಡಲಾಗಿದೆ. ಚಿಕ್ಕಬಳ್ಳಾಪುರ ನಗರದ ಸೋಂಕಿತ ವೃದ್ಧ ವಾಸವಿದ್ದ ಏರಿಯಾ ಅಕ್ಕ ಪಕ್ಕದ 4 ವಾರ್ಡುಗಳನ್ನು  ಸೀಲ್‍ಡೌನ್ ಮಾಡಲಾಗಿದೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top