ಡಿವಿಜಿ ಸುದ್ದಿ, ತುಮಕೂರು: ಕೊರೊನಾ ವೈರಸ್ ವಿರುದ್ಧದ ಹೋರಾಟಕ್ಕಾಗಿ ಸಿದ್ಧಗಂಗಾ ಮಠದ ವತಿಯಿಂದ 50 ಲಕ್ಷ ರೂಪಾಯಿಯನ್ನು ಮುಖ್ಯಮಂತ್ರಿಗಳ ವಿಪತ್ತು ಪರಿಹಾರ ನಿಧಿಗೆ ನೀಡಲಾಯಿತು.
ಸಿದ್ದಗಂಗಾ ಪೀಠಾಧ್ಯಕ್ಷ ಶ್ರೀ ಸಿದ್ಧಲಿಂಗ ಸ್ವಾಮೀಜಿಗಳು ಇಂದು ಮಠದಿಂದ 25 ಲಕ್ಷ ರೂ. ಹಾಗೂ ವಿದ್ಯಾಸಂಸ್ಥೆಯಿಂದ 25ಲಕ್ಷ ರೂ. ಸೇರಿ ಒಟ್ಟು 50 ಲಕ್ಷ ರೂ.ಗಳ ಡಿಡಿಯನ್ನು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಅವರ ಮೂಲಕ ಸಿಎಂ ಪರಿಹಾರ ನಿಧಿಗೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಶಾಸಕ ಜಿ.ಬಿ.ಜ್ಯೋತಿಗಣೇಶ್, ಜಿಲ್ಲಾಧಿಕಾರಿ ಡಾ. ಕೆ.ರಾಕೇಶ್ ಕುಮಾರ್, ಸಿದ್ದಗಂಗಾ ಮಠದ ವಿಶ್ವನಾಥಯ್ಯ, ಟಿ.ಕೆ.ನಂಜುಂಡಪ್ಪ, ಮತ್ತಿತರರು ಹಾಜರಿದ್ದರು.



