ಡಿವಿಜಿ ಸುದ್ದಿ, ಚಿತ್ರದುರ್ಗ: ಚಿತ್ರದುರ್ಗದಲ್ಲಿ 100 ಗಡಿ ತಲುಪುವತ್ತ ಕೊರೊನಾ ಪ್ರಕರಣ ಪತ್ತಯಾಗುತ್ತಿರುವ ಸಂದರ್ಭದಲ್ಲಿ ವೈರಸ್ ಹರಡುವಿಕೆ ನಿಯಂತ್ರಣಕ್ಕಾಗಿ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಯೋಧರೊಬ್ಬರು ಜಮೀನಿನಲ್ಲಿ ಶೆಡ್ ಹಾಕಿಕೊಂಡು ಸ್ವಯಂ ಕ್ವಾರಂಟೈನ್ ಗೆ ಒಳಗಾಗಿದ್ದಾರೆ.
ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿರುವ ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಖಂಡೇನಹಳ್ಳಿ ಗ್ರಾಮದ ಯೋಧ ಯೋಗೀಶ್ ರಜೆ ಮೇಲೆ ಸ್ವಗ್ರಾಮಕ್ಕೆ ಆಗಮಿಸಿದದ್ದು, ಸಯಂ ಕ್ವಾರಂಟೈನ್ ಆಗಿದ್ದಾರೆ. 19 ವರ್ಷ ಸೇನೆಯಲ್ಲಿ ಸೇವೆ ಸಲ್ಲಿಸಿರುವ ಯೋಧ್ ಯೋಗೀಶ್ ಜುಲೈ 5 ರಂದು ಸ್ವಗ್ರಾಮಕ್ಕೆ ಆಗಮಿಸಿ ಸ್ವಯಂ ಕ್ವಾರಂಟೈನ್ನಲ್ಲಿದ್ದಾರೆ. ಯೋಗೇಶ್ ಉತ್ತರ ಪ್ರದೇಶದ ಝಾನ್ಸಿಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.
ವೈದ್ಯರು ಜಮೀನಿಗೆ ಭೇಟಿ ನೀಡಿ ಕೋವಿಡ್ ತಪಾಸಣೆ ನಡೆಸಿದ್ದಾರೆ. ತನ್ನಿಂದ ಗ್ರಾಮದ ಯಾರಿಗೂ ಸಮಸ್ಯೆ ಆಗಬಾರದೆಂದು ಸ್ವಯಂ ಕ್ವಾರಂಟೈನ್ ಗೆ ಯೋಧ ಒಳಗಾಗಿದ್ದಾನೆ ಎಂದಿದ್ದಾರೆ.



