ಇನ್ಮುಂದೆ ಏರಿಯಾ ಸೀಲ್ ಡೌನ್ ಇರಲ್ಲ; ಸೋಂಕಿತರ ಮನೆ ಮಾತ್ರ ಸೀಲ್ ಡೌನ್: ಸಚಿವ ಡಾ.ಕೆ. ಸುಧಾಕರ್

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಡಿವಿಜಿ ಸುದ್ದಿ, ಉಡುಪಿ: ಇನ್ಮುಂದೆ ರಾಜ್ಯದಲ್ಲಿ ಸೀಲ್‍ಡೌನ್, ಕಂಟೈನ್ಮೆಂಟ್ ಝೋನ್ ರದ್ದು ಮಾಡಿ, ಕೊರೊನಾ ಸೋಂಕಿತನ ಮನೆ ಮಾತ್ರ ಸೀಲ್ ಡೌನ್ ಮಾಡುವ  ಯೋಜನೆ  ಇದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಹೇಳಿದರು.

ಸುದ್ದಿಗಾರರೊಂದಿಗೆ  ಮಾತನಾಡಿದ ಅವರು, ಕೊರೊನಾ ಸೋಂಕು ಹಿನ್ನೆಲೆಯಲ್ಲಿ ಮಹಾರಾಷ್ಟ್ರದಿಂದ ಬಂದವರಿಗೆ ಸಾಂಸ್ಥಿಕ ಕ್ವಾರಂಟೈನ್ ಅವಧಿ 7 ದಿನಕ್ಕೆ ಮೊಟಕು ಮಾಡಲಾಗಿದೆ. ಸಾವಿರಾರು ಜನರನ್ನು ಕ್ವಾರಂಟೈನ್ ಮಾಡುವುದು ಕಷ್ಟ. ಕಂಟೈನ್ಮೆಂಟ್ ಝೋನ್‍ನ ವಿವರಣೆ ಬದಲಾಗಿದೆ ಎಂದರು.

ಉಡುಪಿಯ ಶಾಸಕರಾದ ಹಾಲಾಡಿ ಶ್ರೀನಿವಾಸ ಶೆಟ್ಟಿ ಮತ್ತು ರಘುಪತಿ ಭಟ್ ಈ ಸಲಹೆ ನೀಡಿದ್ದಾರೆ. ಸೋಂಕಿತನ ಮನೆಯ ಬೀದಿಯನ್ನು ಕಂಟೈನ್ಮೆಂಟ್ ಝೋನ್ ಮಾಡುತ್ತಿದ್ದೇವೆ. ಜೊತೆಗೆ ಸೋಂಕಿತನ ಮನೆಯನ್ನು ಮಾತ್ರ ಸೀಲ್ ಮಾಡುವ ಪ್ರಸ್ತಾವ ಇದೆ ಎಂದರು.

corona 1

ಕ್ವಾರಂಟೈನ್‍ನಲ್ಲಿ ಜನರ ಬೇಡಿಕೆ ಬಹಳ ಇರುತ್ತದೆ. ಅಷ್ಟು ದೊಡ್ಡ ಸಂಖ್ಯೆಯ ಜನರನ್ನು ಸಂಭಾಳಿಸೋದು ಕಷ್ಟ. ಸೀಲ್ ಆದ ಮನೆಗೆ ಅಗತ್ಯ ವಸ್ತುಗಳನ್ನು ಸರ್ಕಾರವೇ ಒದಗಿಸುತ್ತದೆ. ಅಧಿಕಾರಿಗಳ ಜೊತೆ ಈ ಬಗ್ಗೆ ಚರ್ಚೆ ಮಾಡುತ್ತೇವೆ. ಶೀಘ್ರ ಈ ನಿರ್ಧಾರವನ್ನು ಸರ್ಕಾರ ಕೈಗೊಳ್ಳಲಿದೆ ಎಂದು ಡಾ. ಸುಧಾಕರ್ ಹೇಳಿದರು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *