Connect with us

Dvgsuddi Kannada | online news portal | Kannada news online

ಲಾಕ್ ಡೌನ್ ನಿಂದ ವೈರಸ್ ಮುಂದೂಡಬಹುವುದೇ ಹೊರತು, ತಡೆಯಲು ಸಾಧ್ಯವಿಲ್ಲ : ಡಿಸಿಎಂ ಅಶ್ವತ್ಥ್ ನಾರಾಯಣ್

ಪ್ರಮುಖ ಸುದ್ದಿ

ಲಾಕ್ ಡೌನ್ ನಿಂದ ವೈರಸ್ ಮುಂದೂಡಬಹುವುದೇ ಹೊರತು, ತಡೆಯಲು ಸಾಧ್ಯವಿಲ್ಲ : ಡಿಸಿಎಂ ಅಶ್ವತ್ಥ್ ನಾರಾಯಣ್

ಡಿವಿಜಿ ಸುದ್ದಿ, ಬೆಂಗಳೂರು: ಲಾಕ್ ಡೌನ್ ಜನರ ಸುರಕ್ಷತಾ ದೃಷ್ಟಿಯಿಂದ ಒಳ್ಳೆಯದು. ಆದರೆ ಲಾಕ್‍ಡೌನ್‍ನಿಂದ ವೈರಸ್ ಹರಡುವುದನ್ನು ಮುಂದೂಡಬಹುದೇ ಹೊರತು ತಡೆಯಲು ಸಾಧ್ಯವಿಲ್ಲ ಎಂದು ಡಿಸಿಎಂ ಅಶ್ವತ್ಥ್ ನಾರಾಯಣ್ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಾಕ್‍ಡೌನ್ ಮತ್ತೆ ಹೇರುವ ಬಗ್ಗೆ ಇಲ್ಲಿಯ ವರೆಗೆ ನಮಗೆ ಒಲವು ಇಲ್ಲ. ಮುಂದಿನ ದಿನಗಳಲ್ಲಿ ಪರಿಸ್ಥಿತಿ ಅವಲೋಕಿಸಿ ತೀರ್ಮಾನ ತೆಗೆದುಕೊಳ್ಳಬೇಕಿದೆ ಎಂದು ಹೇಳುವ ಮೂಲಕ ಅನಿವಾರ್ಯ ಪರಿಸ್ಥಿತಿ ಬಂದರೆ ಶನಿವಾರ ಲಾಕ್ ಡೌನ್ ಮಾಡ್ತೀವಿ ಎಂದರು.

ಕೊರೊನಾ ಕೇಸ್‍ಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಶನಿವಾರ ಕೂಡ ಲಾಕ್ ಡೌನ್ ಮಾಡಬೇಕೋ ಬೇಡವೋ ಎಂದು ಚರ್ಚೆ ಮಾಡಿ ತೀರ್ಮಾನ ತೆಗೆದುಕೊಳ್ಳಬೇಕಿದೆ. ಇದು ನನ್ನ ವೈಯಕ್ತಿಕ ಅಭಿಪ್ರಾಯ ಎಂದರು.

ಪಿಪಿಇ ಕಿಟ್ ಬೆಲೆ ಮಾರ್ಕೆಟ್ ನಲ್ಲಿ ಹೆಚ್ಚು ಇತ್ತು. ದಿನ ಕಳೆದಂತೆ ಅದರ ಬೆಲೆ ಕಡಿಮೆ ಆಗಿದೆ. ಇದರಲ್ಲಿ ಯಾವುದೇ ಅವ್ಯವಹಾರ ಆಗಿಲ್ಲ. ವಿಪಕ್ಷಗಳು ಸಂಕಷ್ಟ ಸಮಯದಲ್ಲಿ ಸರ್ಕಾರದ ಜೊತೆ ನಿಲ್ಲುವುದು ಬಿಟ್ಟು, ಇಂತಹ ಆರೋಪ ಮಾಡುವುದರಲ್ಲಿ ಸತ್ಯಾಂಶವಿಲ್ಲ.  ಕೋವಿಡ್ ಉಪಕರಣಗಳ ಖರೀದಿಯಲ್ಲಿ ಯಾವುದೇ ಅವ್ಯವಹಾರ ಆಗಿಲ್ಲ. ಆರೋಪದಲ್ಲಿ  ರಾಜಕೀಯ ಮಾಡಬಾರದು. ಜನರ ತೆರಿಗೆ ಹಣ ಯಾವುದೇ ಕಾರಣಕ್ಕೂ ನಷ್ಟವಾಗಿಲ್ಲ ಎಂದು ವಿಪಕ್ಷಗಳ ಆರೋಪಕ್ಕೆ ತಿರುಗೇಟು ನೀಡಿದರು.

 

 

 

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top