ಡಿವಿಜಿ ಸುದ್ದಿ, ಬೆಂಗಳೂರು: ರಾಜ್ಯದಲ್ಲಿ ಇಂದು 67 ಕೋವಿಡ್–19 ಪ್ರಕರಣಗಳು ದೃಢಪಟ್ಟಿವೆ. ಒಬ್ಬರು ಮೃತಪಟ್ಟಿದ್ದು, 13 ಜನ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ರಾಜ್ಯದಲ್ಲಿ ಸೊಂಕಿತರ ಸಂಖ್ಯೆ 1,462ಕ್ಕೆ ಏರಿಕೆಯಾಗಿದ್ದು, 864 ಮಂದಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈವರೆಗೆ 41 ಜನ ಮೃತಪಟ್ಟಿದ್ದಾರೆ. 556 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆ ಹೊಂದಿದ್ದಾರೆ.
ಬೆಂಗಳೂರಿನಲ್ಲಿ 4, ಮಂಡ್ಯದಲ್ಲಿ 8, ಕಲಬುರ್ಗಿಯಲ್ಲಿ 7, ಬೀದರ್ನಲ್ಲಿ 10, ಉತ್ತರ ಕನ್ನಡ 1, ಹಾಸನದಲ್ಲಿ 21, ದಕ್ಷಿಣ ಕನ್ನಡದಲ್ಲಿ 1, ಉಡುಪಿಯಲ್ಲಿ 6, ತುಮಕೂರಿನಲ್ಲಿ 4, ರಾಯಚೂರು 4, ಯಾದಗಿರಿಯಲ್ಲಿ1 ಹೊಸ ಪ್ರಕರಣಗಳು ಪತ್ತೆಯಾಗಿವೆ.



