Connect with us

Dvgsuddi Kannada | online news portal | Kannada news online

ದಾವಣಗೆರೆ : ರಾತ್ರಿ 8 ರಿಂದ ಬೆಳಗ್ಗೆ 5 ಗಂಟೆ ವರೆಗೆ ಕರ್ಫ್ಯೂ ಜಾರಿ; ಜಿಲ್ಲಾಧಿಕಾರಿ ಆದೇಶ

ದಾವಣಗೆರೆ

ದಾವಣಗೆರೆ : ರಾತ್ರಿ 8 ರಿಂದ ಬೆಳಗ್ಗೆ 5 ಗಂಟೆ ವರೆಗೆ ಕರ್ಫ್ಯೂ ಜಾರಿ; ಜಿಲ್ಲಾಧಿಕಾರಿ ಆದೇಶ

ಡಿವಿಜಿ ಸುದ್ದಿ, ದಾವಣಗೆರೆ: ಕೋವಿಡ್ 19 ಸೋಂಕು ಪ್ರಕರಣಗಳು ಉಲ್ಬಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ  ಮುಂಜಾಗ್ರತಾ ಕ್ರಮವಾಗಿ ಪ್ರತಿ ದಿನ ರಾತ್ರಿ 8 ರಿಂದ ಬೆಳಿಗ್ಗೆ 5 ಗಂಟೆಯವರೆಗೆ ರಾತ್ರಿ ಕರ್ಫ್ಯೂ  ಜಾರಿ ಮಾಡಿ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಆದೇಶ ಹೊರಡಿಸಿದ್ದಾರೆ.

ಕೊರೊನಾ ವೈರಸ್ ಸೋಂಕು ಹರಡದಂತೆ ತಡೆಯುವ ಸಲುವಾಗಿ, ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಕರ್ಫ್ಯೂ ಜಾರಿ ಮಾಡಲಾಗಿದೆ.  ಈ ಅವಧಿಯಲ್ಲಿ ಅತ್ಯಗತ್ಯ ಚಟುವಟಿಕೆಗಳನ್ನು ಹೊರತುಪಡಿಸಿ, ಅವಶ್ಯಕವಲ್ಲದ ಚಟುವಟಿಕೆಗಳ, ವ್ಯಕ್ತಿಗಳ ಹಾಗೂ ವಾಹನಗಳ ಸಂಚಾರವನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿರುತ್ತದೆ.

ಜುಲ್ಐ 05 ಭಾನುವಾರದಿಂದ ಮುಂದಿನ ನಾಲ್ಕು ಭಾನುವಾರಗಳು ಕಟ್ಟುನಿಟ್ಟಾಗಿ  ಭಾನುವಾರ ಸಂಪೂರ್ಣ ನಿಷೇಧ ಇರಲಿದೆ. ಆಗಸ್ಟ್ 2 ರವರೆಗ ಲಾಕ್‍ಡೌನ್ ಜಾರಿ ಇರುತ್ತದೆ. ಆದರೆ ಲಾಕ್‍ಡೌನ್ ಅವಧಿಯಲ್ಲಿ ಅಗತ್ಯ ಸರಕು ಸರಂಜಾಮುಗಳ ಸಾಗಾಣಿಕೆಗೆ ಯಾವುದೇ ನಿರ್ಬಂಧವಿರುದಿಲ್ಲ.

ಈ ಆದೇಶವನ್ನು ಉಲ್ಲಂಘಿಸುವವರ ವಿರುದ್ದ ಭಾರತೀಯ ದಂಡ ಸಂಹಿತೆಯ ಕಲಂ 188 & 270 ಹಾಗೂ ವಿಪತ್ತು ನಿರ್ವಹಣಾ ಕಾಯ್ದೆ 2005 ರ ಸೆಕ್ಷನ್ 51 ರಿಂದ 60 ರ ಪ್ರಕಾರ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top