ಡಿವಿಜಿ ಸುದ್ದಿ, ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು, ಇದೀಗ ಸೋಂಕಿನಿಂದ ಮೃತರ ಸಂಖ್ಯೆ 43ಕ್ಕೆ ಏರಿಕೆಯಾಗಿದೆ.
ಕೋವಿಡ್-19ಗೆ ನೆಲಮಂಗಲದ 55 ವರ್ಷದ ರೈತ ಮಹಿಳೆ (ರೋಗಿ-1686) ಬಲಿಯಾಗಿದ್ದಾರೆ. ಈ ಮೂಲಕ ನೆಲಮಂಗಲದಲ್ಲಿ ಮೊದಲ ಸಾವು ದಾಖಲಾದರೆ, ರಾಜ್ಯದಲ್ಲಿ ಕೊರೊನಾದಿಂದ ಮೃತಪಟ್ಟವರ ಸಂಖ್ಯೆ 43ಕ್ಕೆ ಏರಿಕೆಯಾಗಿದೆ.
ಮೃತ ಮಹಿಳೆಯು ನೆಲಮಂಗಲ ತಾಲೂಕಿನ ವೀರಸಾಗರ ಗ್ರಾಮದ ನಿವಾಸಿಯಾಗಿದ್ದು, ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದರು. ಅಷ್ಟೇ ಅಲ್ಲದೆ ಕಳೆದ ಎರಡು ವರ್ಷದಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು.
ತುಮಕೂರು ಜಿಲ್ಲೆಯ ಕೊರಟಗೆರೆ ಅಣ್ಣನ ಮನೆಯಲ್ಲಿದ್ದಾಗ ಅವರಿಗೆ ತೀವ್ರ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತ್ತು. ಹೀಗಾಗಿ ಅವರನ್ನು ಮೇ 22ರಂದು ತುಮಕೂರು ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಅವರ ಗಂಟಲ ದ್ರವವನ್ನು ಕೊರೊನಾ ಟೆಸ್ಟ್ಗೆ ಕಳುಹಿಸಿದಾಗ ರಿಪೋರ್ಟ್ ಪಾಸಿಟಿವ್ ಬಂದಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಹಿಳೆ ಮೃತಪಟ್ಟಿದ್ದಾರೆ.