ಡಿವಿಜಿ ಸುದ್ದಿ, ಬೆಂಗಳೂರು: ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಇಂದು 141 ಹೊಸ ಪ್ರಕರಣಗಳು ದೃಢ ಪಟ್ಟಿದೆ. ಸೋಂಕಿನಿಂದ ಒಬ್ಬ ವ್ಯಕ್ತಿ ಮೃತಪಟ್ಟಿರುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2,922ಕ್ಕೆ ಮತ್ತು ಸಾವಿನ ಸಂಖ್ಯೆ 48ಕ್ಕೆ ಏರಿಕೆಯಾಗಿದೆ. 997 ಜನರು ಗುಣಮುಖರಾಗಿದ್ದು, 1,874 ಸೋಂಕಿತರಿಗೆ ಚಿಕಿತ್ಸೆ ಮುಂದುವರಿದಿದೆ. 15 ರೋಗಿಗಳ ಸಂಖ್ಯೆ ಗಂಭೀರವಾಗಿದ್ದು, ಐಸಿಯುನಲ್ಲಿ ಇರಿಸಲಾಗಿದೆ.
ಬೆಂಗಳೂರು ನಗರದಲ್ಲಿ 33, ಯಾದಗಿರಿಯಲ್ಲಿ 18, ದಕ್ಷಿಣ ಕನ್ನಡದಲ್ಲಿ 14, ಹಾಸನ ಮತ್ತು ಉಡುಪಿಯಲ್ಲಿ ತಲಾ 13, ವಿಜಯಪುರದಲ್ಲಿ 11, ಬೀದರ್ನಲ್ಲಿ 10, ಶಿವಮೊಗ್ಗದಲ್ಲಿ 6, ಹಾವೇರಿ ಮತ್ತು ದಾವಣಗೆರೆಯಲ್ಲಿ ತಲಾ 4, ಕೋಲಾರದಲ್ಲಿ 3, ಉತ್ತರ ಕನ್ನಡ, ಧಾರವಾಡ, ಮೈಸೂರು ಮತ್ತು ಕಲಬುರಗಿಯಲ್ಲಿ ತಲಾ 2, ಚಿತ್ರದುರ್ಗ, ತುಮಕೂರು, ಬೆಳಗಾವಿ ಮತ್ತು ಬೆಂಗಳೂರು ಗ್ರಾಮಾಂತರದಲ್ಲಿ ತಲಾ 1 ಪ್ರಕರಣಗಳು ಪತ್ತೆಯಾಗಿವೆ.
ಸಂಜೆಯ ಪತ್ರಿಕಾ ಪ್ರಕಟಣೆ 30/05/2020@CMofKarnataka @BSYBJP @DVSadanandGowda @SureshAngadi_ @sriramulubjp @drashwathcn @BSBommai @mla_sudhakar @iaspankajpandey @Tejasvi_Surya @BBMP_MAYOR @BBMPCOMM @CCBBangalore @BlrCityPolice @KarnatakaVarthe @PIBBengaluru @KarFireDept pic.twitter.com/qoPHB2DDM6
— Karnataka Health Department (@DHFWKA) May 30, 2020



