ಡಿವಿಜಿ ಸುದ್ದಿ, ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೊನಾ ಮಹಾ ಸ್ಫೋಟ ಸಂಭವಿಸಿದ್ದು, 4,169 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ. 104 ಜನರು ಮೃತಪಟ್ಟಿದ್ದಾರೆ.
ಈ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದ್ದು, ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 51,422ಕ್ಕೆ ಏರಿಕೆಯಾಗಿದೆ. ಈವರೆಗೆ ರಾಜ್ಯದಲ್ಲಿ 1,032 ಮಂದಿ ಮೃತಪಟ್ಟಿದ್ದಾರೆ.
19,729 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 539 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಕೂಡ 1,263 ಜನರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ30,655 ಸಕ್ರಿಯ ಪ್ರಕರಣಗಳು ರಾಜ್ಯದಲ್ಲಿವೆ.
ಬೆಂಗಳೂರಿನಲ್ಲಿ ಒಂದೇ ದಿನ 2,344 ಜನರಿಗೆ ಸೋಂಕು ತಗುಲಿದ್ದು, ಸೋಂಕಿತರ ಸಂಖ್ಯೆ 25 ಸಾವಿರ ದಾಟಿದೆ. ಇಂದು ಒಂದೇ ದಿನ 70 ಜನ ಬೆಂಗಳೂರಿನಲ್ಲೇ ಮೃತಪಟ್ಟಿದ್ಧಾರೆ.
ದಕ್ಷಿಣ ಕನ್ನಡದಲ್ಲಿ 238, ಧಾರವಾಡ 176, ವಿಜಯಪುರ 144, ಮೈಸೂರು 130, ಕಲಬುರಗಿ 123, ಉಡುಪಿ 113, ರಾಯಚೂರು 101, ಬೆಳಗಾವಿ 92, ಉತ್ತರ ಕನ್ನಡ 79, ಚಿಕ್ಕಬಳ್ಳಾಪುರ 77, ಬೀದರ್ 53, ಶಿವಮೊಗ್ಗ 46, ಬಳ್ಳಾರಿ 44, ಗದಗ 44, ಕೋಲಾರ 43, ಬಾಗಲಕೋಟೆ 39, ಯಾದಗಿರಿ 34, ಕೊಪ್ಪಳ 32, ಹಾಸನ 31, ಬೆಂಗಳೂರು ಗ್ರಾಮಾಂತರ 31, ಚಿಕ್ಕಮಗಳೂರು 30, ಚಿತ್ರದುರ್ಗ 21, ಹಾವೇರಿ 18, ಕೊಡಗು 18, ಚಾಮರಾಜನಗರ 16, ತುಮಕೂರು 12, ಮಂಡ್ಯ 11 ಮತ್ತು ರಾಮನಗರದಲ್ಲಿ 4 ಜನರಿಗೆ ಕೊರೊನಾ ವೈರಸ್ ಸೋಂಕು ಪತ್ತೆಯಾಗಿದೆ.
ಇಂದಿನ ಪತ್ರಿಕಾ ಪ್ರಕಟಣೆ 16/07/2020.
ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಕೆಳಗೆ ಈ ಲಿಂಕನ್ನು ಕ್ಲಿಕ್ ಮಾಡಿ.https://t.co/DVzBKoU2vp @BMTC_BENGALURU @NammaBESCOM @tv9kannada @publictvnews @suvarnanewstv @timesofindia @prajavani @udayavani_web @TV5kannada @Vijaykarnataka @VVani4U pic.twitter.com/k1lNMxsqFi— Karnataka Health Department (@DHFWKA) July 16, 2020



