ಗ್ರಾಮ ಪಂಚಾಯ್ತಿಗಳಿಗೆ ಆಡಳಿತಾಧಿಕಾರಿ ನೇಮಕಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ವಿರೋಧ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಡಿವಿಜಿ ಸುದ್ದಿ, ಬೆಂಗಳೂರು: ಕೊರೊನಾ ವೈರಸ್ ಹಿನ್ನೆಲೆ ಗ್ರಾಮ ಪಂಚಾಯ್ತಿ ಚುನಾವಣೆಯನ್ನು ಮುಂದೂಡಿ, ಚುನಾವಣೆ ಆಗುವವರೆಗೂ ಆಡಳಿತಾಧಿಕಾರಿ ನೇಮಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿರುವ ಕ್ರಮವನ್ನು ವಿಪಕ್ಷ ನಾಯಕ ಸಿದ್ದರಾಮಯ್ಯ ವಿರೋಧಿಸಿ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.

ಸರ್ಕಾರ  ಆಡಳಿತಾಧಿಕಾರಿ ನೇಮಿಸುವ ಕೆಟ್ಟ ಸಂಪ್ರದಾಯಕ್ಕೆ ಸರ್ಕಾರ ನಾಂದಿ ಹಾಡಬಾರದು. ಅದರ ಬದಲು, ಪ್ರಸ್ತುತ ಅಧಿಕಾರದಲ್ಲಿರುವ ಎಲ್ಲ ಗ್ರಾಮ ಪಂಚಾಯಿತಿಗಳನ್ನು ಮತ್ತು ಸದಸ್ಯರನ್ನು ಚುನಾವಣೆ ನಡೆಸುವವರೆಗೆ ಮುಂದುವರೆಸಬೇಕು ಎಂದು ಆಗ್ರಹಿಸಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರಿಗೆ ಮನವಿ ಮಾಡಿದ್ದಾರೆ.

ಆಡಳಿತಾಧಿಕಾರಿ ಮತ್ತು ನಾಮನಿರ್ದೇಶಿತ ಆಡಳಿತ ಸಮಿತಿ ರಚಿಸಲು ಸರ್ಕಾರ ಮುಂದಾದರೆ, ಅದು ಪ್ರಜಾಪ್ರಭುತ್ವದ ಮತ್ತು ಸಂವಿಧಾನದ ಆಶಯಗಳಿಗೆ ಸಂಪೂರ್ಣ ವಿರುದ್ಧವಾಗುತ್ತದೆ. ಒಂದು ವೇಳೆ ತಾತ್ಕಾಲಿಕ ವ್ಯವಸ್ಥೆ ಮಾಡಲೇಬೇಕೆಂದಿದ್ದರೆ 1987ರಲ್ಲಿ ಮಾಡಿದಂತೆ ಅವಧಿ ವಿಸ್ತರಿಸಬೇಕು. ಆ ಮೂಲಕ ಪ್ರಜಾಪ್ರಭುತ್ವದ ಆಶಯಗಳನ್ನು ಉಳಿಸಬೇಕು ಒತ್ತಾಯಿಸಿದ್ದಾರೆ.

 

 

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *