ಕೂಡಲೇ ಸೀಲ್ ಡೌನ್ ಗೊಂದಲ ನಿವಾರಿಸಲಿ:ಎಚ್.ಡಿ ಕುಮಾರಸ್ವಾಮಿ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
2 Min Read

ಡಿವಿಜಿ ಸುದ್ದಿ, ಬೆಂಗಳೂರುಸೀಲ್‌ಡೌನ್‌‌ಗೆ ಸಂಬಂಧಿಸಿದಂತೆ ಬಗೆ ಬಗೆಯ ಸುದ್ದಿ ಹರಿದಾಡುತ್ತಿವೆ.   ಜನರಲ್ಲಿ ಭೀತಿ ಆವರಿಸಿದ್ದು, ಸಮೂಹ ಸನ್ನಿಗೆ ಸಿಲುಕಿದ್ದಾರೆ. ಇದು ಮತ್ತೊಂದು ಸಮಸ್ಯೆ ಸೃಷ್ಟಿಸುವ ಮುನ್ನ,  ಸರ್ಕಾರ ಜನರ ಗೊಂದಲ ನಿವಾರಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು,  ಆಹಾರ, ಔಷಧ, ಅಗತ್ಯ ವಸ್ತುಗಳ ಲಭ್ಯತೆ ಬಗ್ಗೆ ಜನರಲ್ಲಿ ಅನುಮಾನಗಳು ಮೂಡಿದ್ದು, ಅವುಗಳ ದಾಸ್ತಾನಿಗೆ ಮುಂದಾಗಿದ್ದಾರೆ. ಅಲ್ಲದೆ, ಸೀಲ್‌ಡೌನ್ ಭೀತಿ ಜನರನ್ನು ಸಮೂಹಸನ್ನಿಗೆ ದೂಡಿರುವಾಗಲೇ, ದಿನಸಿ ಅಂಗಡಿ, ಔಷಧಾಲಯಗಳು ತೆರೆಯಬೇಕೋ ಬೇಡವೋ ಎಂಬ ಅನುಮಾನ ಮಾರಾಟಗಾರರಲ್ಲಿ ಮೂಡಿದೆ. ಹಾಗೇನಾದರೂ ದಿನಸಿ ಅಂಗಡಿಗಳು, ಔಷಧಾಲಯಗಳು ಭೀತಿಯಿಂದ ಮುಚ್ಚಿದರೆ, ಜನರಿಗೆ ಆಹಾರ, ಔಷಧಗಳ ಲಭ್ಯತೆಯಲ್ಲಿ ಸಮಸ್ಯೆ ಸೃಷ್ಟಿಯಾಗಲಿದೆ.

ಸೀಲ್‌ಡೌನ್ ಮಾಡಲು ಸರ್ಕಾರ ನಿರ್ಧರಿಸಿದೆಯೇ? ಮಾಡುವುದಿದ್ದರೆ ಯಾವ್ಯಾವ ಜಿಲ್ಲೆಗಳಿಗೆ ಇದು ಅನ್ವಯ? ಸೀಲ್‌ಡೌನ್ ಸಮಯದಲ್ಲಿ ಏನೆಲ್ಲ ಲಭ್ಯ, ಏನು ಲಭ್ಯವಿರುವುದಿಲ್ಲ ಎಂಬುದರ ಬಗ್ಗೆ ಸರ್ಕಾರ ಕೂಡಲೇ ಅಧಿಕೃತವಾಗಿ ಮಾಹಿತಿ ನೀಡಬೇಕು. ಇಲ್ಲವಾದಲ್ಲಿ ಗಾಳಿ ಸುದ್ದಿಗಳು, ಸುಳ್ಳು ಮಾಹಿತಿಗಳು ಜನರ ದಿಕ್ಕು ತಪ್ಪಿಸಲಿವೆ ಎಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಅಲ್ಲದೆ, ಲಾಕ್ ಡೌನ್ ಮೂರನೇ ವಾರದ ಮುಕ್ತಾಯಕ್ಕೆ ಬರುತ್ತಿದ್ದರೂ ಬೆಳೆದ ಬೆಳೆ  ಮಾರಾಟವಾಗದೆ ಜಮೀನಿನಲ್ಲೇ ಕೊಳೆಯುತ್ತಿರುವುದನ್ನು ಕಂಡು ರೈತರು ‘ಹೆತ್ತ ಮಕ್ಕಳು’ ಅಕಾಲ ಮರಣಕ್ಕೀಡಾದಂತೆ ಸಂಕಟ ಪಡುತ್ತಿದ್ದಾರೆ. ರೈತರ ಸಂಕಷ್ಟ ಪರಿಹರಿಸಲು ಪ್ರತಿ ಗ್ರಾಮಗಳಲ್ಲಿ ಪ್ರತಿಯೊಬ್ಬ ರೈತರು ಬೆಳೆದ ಬೆಳೆಗಳನ್ನು ಸಮೀಕ್ಷೆ ಮಾಡಿ ಮೂರು ದಿನದಲ್ಲಿ ಪರಿಹಾರ ನೀಡಲಿ ಎಂದು ಆಗ್ರಹಿಸಿದ್ದಾರೆ.

ರಾಜ್ಯ ಸರ್ಕಾರ ಕೃಷಿ ಉತ್ಪನ್ನಗಳ ಸುಗಮ ಮಾರಾಟ, ಸಾಗಾಣಿಕೆ ಮತ್ತು ಸೂಕ್ತ ಮಾರುಕಟ್ಟೆ ಒದಗಿಸುವಲ್ಲಿ ಇನ್ನೂ ಕ್ರಿಯಾಶೀಲವಾಗಿಲ್ಲ. ಬರೀ ಚಿಂತನ-ಮಂಥನದಲ್ಲೇ ಕಾಲ ಕಳೆಯುವುದನ್ನು ಬಿಟ್ಟು ತಕ್ಷಣವೇ ರೈತರ ನೆರವಿಗೆ ಧಾವಿಸಬೇಕು.
ರಾಜ್ಯಾದ್ಯಂತ ದಾಳಿಂಬೆ, ದ್ರಾಕ್ಷಿ, ಬಾಳೆ, ಕಲ್ಲಂಗಡಿ, ಕರ್ಬುಜ, ಮಾವು ಸೇರಿದಂತೆ ಹೂವು ತರಕಾರಿ ಉತ್ಪನ್ನಗಳನ್ನು ಬೆಳೆದ ರೈತರು ಸಾಗಾಣೆ, ಮಾರುಕಟ್ಟೆ ಸಿಗದೆ ಅಲ್ಲೇ ಕೊಳೆಸುವ, ಮಾರುಕಟ್ಟೆಯಲ್ಲಿ ಸುರಿದು ಹೋಗುತ್ತಿರುವ ಪ್ರಸಂಗಗಳು ದಿನನಿತ್ಯ ಹೆಚ್ಚಾಗುತ್ತಿವೆ. ಸರ್ಕಾರ  ಸಮಸ್ಯೆಗಳಿದ್ದರೆ ಗಮನಕ್ಕೆ ತನ್ನಿ ಎನ್ನುವ ಮೂಗಿಗೆ ತುಪ್ಪ ಸವರುವ ಮಾತನಾಡುತ್ತಿದೆಯೇ ಹೊರತು ಕಂಗಾಲಾದ ರೈತರಿಗೆ ಆತ್ಮಸ್ಥೈರ್ಯ ತುಂಬುವ ಪ್ರಾಮಾಣಿಕ ಪ್ರಯತ್ನ ಮಾಡುತ್ತಿಲ್ಲ ಎಂಬುದಕ್ಕೆ ರಾಜ್ಯದಾದ್ಯಂತ ರೈತರು ಪರಿತಪಿಸುತ್ತಿರುವ ನೂರಾರು ಉದಾಹರಣೆಗಳು ಪುಷ್ಟಿ ನೀಡುತ್ತಿವೆ ಎಂದು ಕುಮಾರಸ್ವಾಮಿ ಸರಣಿ  ಟ್ವೀಟ್  ಸರ್ಕಾರವನ್ನು ತರಾಟೆಗೆ ತಗೆದುಕೊಂಡಿದ್ದಾರೆ.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *